September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಬ್ರೇಕ್ ಫೈಲ್ ಆಗಿ ಹಿಟಾಚಿ ತುಂಬಿದ್ದ ಲಾರಿ ಪಲ್ಟಿ

ತಣ್ಣೀರುಪಂತ: ತಣ್ಣೀರುಪಂತ ಗ್ರಾಮದ ಪಾಲೇದು ಸಮೀಪದ ಕಟ್ಟದಮುದೇಲು ಎಂಬಲ್ಲಿ ಹಿಟಾಚಿ ತುಂಬಿದ್ದ ಲಾರಿಯೊಂದು ಬ್ರೇಕ್ ಫೈಲ್ ಆಗಿ ತೋಟಕ್ಕೆ ಪಲ್ವಿಯಾದ ಘಟನೆ ಮೇ12 ರಂದು ನಡೆದಿದೆ.

ಪಾಂಡವರಕಲ್ಲಿನಿಂದ ಪಾಲೇದು ಮಾರ್ಗವಾಗಿ ಕಕ್ಕೆಪದವಿಗೆ ಹೋಗುತ್ತಿದ್ದ ಹಿಟಾಚಿ ತುಂಬಿದ್ದ ಲಾರಿ ಕಟ್ಟಮುದೇಲುವಿನ ತಿರುವುವಿನಲ್ಲಿ ಬ್ರೇಕ್ ಫೈಲ್ ಆಗಿ ಅಲ್ ಮಾದಿ ಎಂಬುವರ ತೋಟಕ್ಕೆ ಟಿಪ್ಪರ್ ಪಲ್ಟಿಯಾಗಿದ್ದು, ಅಡಿಕೆ ಗಿಡಗಳು ಮುರಿದು ಬಿದ್ದಿವೆ. ಅದೃಷ್ಟವಶಾತ್ ಟಿಪ್ಪರ್ ಚಾಲಕನಿಗೆ ಯಾವುದೇ ಅಪಾಯ ಸಂಭವಿಸಿಲ್ಲ.

ಅಪಾಯಕಾರಿ ತಿರುವಿನ ವಿರುದ್ಧ ಸಾರ್ವಜನಿಕರ ಆಕ್ರೋಶ: ಬೆಳ್ತಂಗಡಿ ತಾಲೂಕಿನ ಪಾಲೇದು ಹಾಗೂ ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ಊರನ್ನು ಬೆಸೆಯುವ ಪ್ರಮುಖ ರಸ್ತೆ ಇದಾಗಿದೆ. ಪಾಲೇದು ಪರಿಸರದ ಜನತೆಗೆ ಮಡಂತ್ಯಾರು ಊರನ್ನು ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪ್ರತಿನಿತ್ಯ ಹಲವಾರು ವಾಹನಗಳು ಈ ರಸ್ತೆ ಮೂಲಕ ಸಂಚಾರಿಸುತ್ತದೆ ಆದರೆ ಕಟ್ಟಮುದೇಲುವಿನಲ್ಲಿ ಅಪಾಯಕಾರಿ ತಿರುವುವಿದ್ದು ಈ ಹಿಂದೆ ಹಲವಾರು ಅಪಘಾತ ಸಂಭವಿಸಿ ಮೃತಪಟ್ಟ ಘಟನೆಯು ನಡೆದಿದೆ. ಅವೈಜ್ಞಾನಿಕವಾಗಿ ಇರುವ ತಿರುವಿನ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು ತಿರುವು ಮೃತ್ಯು ಕೂಪಕ್ಕೆ ಎಡೆಮಾಡಿಕೊಟ್ಟಿದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನಹರಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್‌ದಳದಿಂದ ಪ್ರಶಸ್ತಿ ಪತ್ರ ವಿತರಣೆ

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಬಳಂಜ ವಲಯದಲ್ಲಿ ಮಾಸಾಶನ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya

ಮಾಲಾಡಿ: ಕೆತ್ತಿಗುಡ್ಡೆ ಹೊಸ ರಸ್ತೆ ಮತ್ತು ಸಂಪರ್ಕ ಸೇತುವೆ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಒಂದು ಲಕ್ಷ ಮಂಜೂರು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ

Suddi Udaya

ಶಿಶಿಲ ಗ್ರಾಮ ಪಂಚಾಯತ್‌ನಲ್ಲಿ ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
error: Content is protected !!