30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ರಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣರರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ ರೀತಿ ಪ್ರತಿ ವರ್ಷ ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಡೆದ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರವರು ದೇಶ ಕಾಯುವ ಸೈನಿಕರು ಹೇಗೆ ಕಾರ್ಯನಿರ್ವಹಿಸುತ್ತಾರೋ ಹಾಗೆಯೇ ದೇಹ ಕಾಯುವವರು ನಮ್ಮ ದಾದಿಯರು ಎಂದು ಅಭಿಪ್ರಾಯಪಟ್ಟರು ಮತ್ತು ದಾದಿಯರು ವೈದ್ಯಕೀಯ ಕ್ಷೇತ್ರದ ಆಧಾರ ಸ್ತಂಭ ಎಂದು ಅವರ ಸೇವೆಯನ್ನು ಶ್ಲಾಘಿಸಿದರು.

ಅತಿಥಿಯಾಗಿ ಆಗಮಿಸಿದ ಹಿರಿಯ ದಾದಿ ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಪ್ರಬೋಧಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ವಿಶ್ರಾಂತ ಜೀವನ ಸಾಗಿಸುತ್ತಿರುವ ಶ್ರೀಮತಿ ಗುಣವತಿಯವರು ಮಾತನಾಡುತ್ತ ದಾದಿಯರ ಕೆಲಸವೆಂದರೆ ದೇವರ ಪೂಜೆ ಮಾಡಿದಂತೆ, ಅತ್ಯಂತ ಪವಿತ್ರ ವಾದ ಮತ್ತು ನಿಜವಾದ ಅರ್ಥದಲ್ಲಿ ಸೇವೆ ಎಂದು ತನ್ನ 31 ವರ್ಷಗಳ ಅನುಭವಗಳನ್ನು ಸವಿಸ್ತಾರವಾಗಿ ತಿಳಿಸಿದರು.


ದಾದಿಯರ ದಿನಾಚರಣೆಯ ಪ್ರಸ್ತುತಿ ಮತ್ತು ಮಾಹಿತಿಯನ್ನು ಹಿರಿಯ ಸಿಸ್ಟರ್ ಶ್ರೀಮತಿ ಉಷಾ ಗೌಡ ವಿವರಿಸಿದರು.
ಎಲ್ಲ ದಾದಿಯರಿಗೂ ರ‍್ಸಿಂಗ್ ಸುಪರಿಟೆಂಡೆಂಟ್ ಸಿಸ್ಟೆರ್ ವಸಂತ ಕುಮಾರಿಯವರು ಕರ್ತವ್ಯದ ಪ್ರತಿಜ್ಞಾ ವಿಧಿ ಬೋಧಿಸಿದರು.
ದಾದಿಯರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸ್ಪರ್ಧೇ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು . ಡಾ. ಭಾರತಿ ಜಿ. ಕೆ ಧನ್ಯವಾದವಿತ್ತರು.

Related posts

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25ರ ಸಂಭ್ರಮ; ಆಕರ್ಷಕ ದೀಪಾವಳಿ ಆಫರ್

Suddi Udaya

ಕನ್ಯಾಡಿ ಶ್ರೀ ರಾಮ ಮಂದಿರಕ್ಕೆ ಲೋಕೋಪಯೋಗಿ ಸಚಿವರ ಭೇಟಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ತಾಲೂಕಿನಲ್ಲಿ ಮುಂದುವರಿದ ಬೆಟ್ಟಿಂಗ್ ಭರಾಟೆ

Suddi Udaya

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya
error: Content is protected !!