30.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

ಬೆಳ್ತಂಗಡಿ ತಾಲೂಕು ಪಂಚಾಯತಿಯಲ್ಲಿ ನಡೆದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧಿಸಿದ ಗ್ರಾಮ ಪಂಚಾಯತಿಗಳನ್ನು ಪ್ರಶಂಸಾ ಪತ್ರ ಮತ್ತು ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಕಳೆದ ಮಾರ್ಚ್ ತಿಂಗಳಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಜಿ. ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ರವರು ನಿಗದಿತ ಗುರಿ ಸಾಧನೆ ಮಾಡಿದವರನ್ನು ಗುರುತಿಸಿ ಗೌರವಿಸಲು ಸೂಚಿಸಿದ್ದರು.
ಕಳೆದ ವರ್ಷ ನರೇಗಾ ಯೋಜನೆಯಲ್ಲಿ 17555 ಮಾನವ ದಿನಗಳನ್ನು ಸೃಜಿಸಿದ ಬಂದಾರು ಮತ್ತು 15591 ಮಾನವ ದಿನಗಳನ್ನು ಸೃಜಿಸಿದ ಚಾರ್ಮಾಡಿ ಹಾಗೂ 2024-25ರ ಸಾಲಿನಲ್ಲಿ ಹಿಂದಿನ ಸಾಲಿನ ಬಾಕಿ ಸೇರಿ ಶೇ. 100 ತೆರಿಗೆ ವಸೂಲಿ ಮಾಡಿದ್ದ ನಾವೂರು ಸುಲ್ಕೇರಿ ಗ್ರಾಮ ಪಂಚಾಯತಿಗಳಿಗೆ ಸ್ಮರಣಿಕೆ ಮತ್ತು ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು.


ನರೇಗಾ ಯೋಜನೆಯಡಿ 100% ಗುರಿ ಸಾಧಿಸಿದ ಕಳಿಯ ಮರೋಡಿ ಕೊಯ್ಯುರು ಕಲ್ಮoಜ ಅರಸಿನಮಕ್ಕಿ ಹಾಗೂ 2024-25ರ ಸಾಲಿನ ತೆರಿಗೆಗಳ ಬೇಡಿಕೆಯಲ್ಲಿ 100% ತೆರಿಗೆ ವಸೂಲಿ ಮಾಡಿದ ಅಳದಂಗಡಿ ಅಂಡಿಂಜೆ, ಆರಂಬೋಡಿ, ಬಳಂಜ, ಬಂದಾರು, ಬೆಳಾಲು,ಬಾರ್ಯ, ಚಾರ್ಮಾಡಿ, ಇಳಂತಿಲ, ಇಂದಬೆಟ್ಟು, ಕಳಿಯ, ಕಲ್ಮಂಜ,ಕುಕ್ಕೇಡಿ ಕಾಶಿಪಟ್ನ, ಮಚ್ಚಿನ, ಮಡಂತ್ಯಾರು,ಮುಂಡಾಜೆ ಮಾಲಾಡಿ, ಮಲವಂತಿಗೆ, ಮರೋಡಿ, ಮೇಲಂತಬೆಟ್ಟು, ಮಿತ್ತಬಾಗಿಲು, ನಡ, ನಾರಾವಿ, ನೆರಿಯಾ, ನಿಡ್ಲೆ, ಪಡಂಗಡಿ, ಪಟ್ರಮೆ, ಶಿರ್ಲಾಲು,ತಣ್ಣೀರುಪಂತ, ತೆಕ್ಕಾರು, ಉಜಿರೆ, ವೇಣೂರು ಗ್ರಾಮ ಪಂಚಾಯಿತಿಗಳಿಗೆ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಲಾಯಿತು
ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಸ್ಮರಣಿಕೆ ಮತ್ತು ಪ್ರಶಂಸಾ ಪತ್ರಗಳನ್ನು ನೀಡಿ ಗೌರವಿಸಿದರು.

ಕಳೆದ ಸಾಲಿನ ಕನ್ನಡ ರಾಜ್ಯೋತ್ಸವದ ಜಿಲ್ಲಾ ಪ್ರಶಸ್ತಿ ಪುರಸ್ಕೃತರಾದ ಜಯಾನಂದರನ್ನು ಶಾಲು ಹೊದೆಸಿ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.
ಕಚೇರಿ ಅಧೀಕ್ಷಕ ಡಿ. ಪ್ರಶಾಂತ್ ಬಳಂಜ, ಪ್ರಭಾರ ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ, ಪ್ರಭಾರ ಸಹಾಯಕ ನಿರ್ದೇಶಕಿ (ನರೇಗಾ) ಶ್ರೀಮತಿ ಸಫನಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಿತ್ತಬಾಗಿಲು ಗ್ರಾಮ ಪಂಚಾಯತ್ ಪ್ರಭಾರ ಪಂ. ಅ. ಅಧಿಕಾರಿ ಮೋಹನ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು

Related posts

ಶಿಶಿಲ: ತೀರಾ ವಯೋಸಹಜದ ನೊಣಮ್ಮ ರವರಿಂದ ಮತದಾನ

Suddi Udaya

ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ 100 ಶಾಲೆಗಳಿಗೆ ಸ್ಮಾರ್ಟ್ ಕ್ಲಾಸ್ ಮಂಜೂರು

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ , ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಕೇಶವ ಎಂ.ಹೃದಯಾಘಾತದಿಂದ ನಿಧನ

Suddi Udaya

ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಂದಗೋಕುಲ ಗೋಶಾಲೆ ಯಲ್ಲಿ ಗೋಪೂಜೆ

Suddi Udaya

ಪುಕ್ಕಟೆ ಪ್ರಚಾರಕ್ಕಾಗಿ ಬಿಜೆಪಿ ಸರ್ಕಾರದ ಸಾಧನೆಗಳನ್ನು ತನ್ನದೆಂದು ಬಿಂಬಿಸುವ ಬೆಳ್ತಂಗಡಿ ಕಾಂಗ್ರೆಸಿಗರು – ಗಣೇಶ್ ಗೌಡ ನಾವೂರು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಯವರ ಕಾರ್ಯಕರ್ತರ ಜೊತೆ ಸಂವಾದ ಕಾರ್ಯಕ್ರಮದ ವೀಕ್ಷಣೆ

Suddi Udaya
error: Content is protected !!