25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

ಝೊಮ್ಯಾಟೊ (Zomato) ಸಂಸ್ಥೆ ಮೇ 7ರಂದು ನವದೆಹಲಿಯ ಭಾರತ್ ಮಂಟಪದಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಪ್ಲಾಸ್ಟಿಕ್ ಮುಕ್ತ ಫ್ಯೂಚರ್ ಪ್ಯಾಕಥಾನ್ ಸ್ಪರ್ಧೆಯ ಪ್ಯಾಕಿಂಗ್ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ನಿಡ್ಲೆಯ ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಪ್ರಥಮ ಸ್ಥಾನದೊಂದಿಗೆ ೧೦ ಲಕ್ಷ ರೂ. ನಗದು ಪುರಸ್ಕಾರವನ್ನು ಪಡೆದುಕೊಂಡಿದೆ.

ಆಹಾರ ವಿತರಣಾ ಉದ್ಯಮದಲ್ಲಿ ಸುಸ್ಥಿರ ಪಾರ್ಸೆಲ್ ವ್ಯವಸ್ಥೆಗಳನ್ನು ಉತ್ತೇಜಿಸುವ ಉದ್ದೇಶ ಹೊಂದಿರುವ ಸ್ಟಾರ್ಟ್‌ಅಪ್ ಇಂಡಿಯಾ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (DPIIT) ಸಹಯೋಗದೊಂದಿಗೆ ಈ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಪ್ಯಾಕಥಾನ್ ಸ್ಪರ್ಧೆ ಗೆದ್ದಿರುವುದಕ್ಕೆ ಹರ್ಷ ವ್ಯಕ್ತಪಡಿಸಿರುವ ಅಗ್ರಿಲೀಫ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅವಿನಾಶ್ ರಾವ್, ಬೆಳೆಯುತ್ತಿರುವ ನಮ್ಮ ಸ್ಟಾರ್ಟ್‌ಅಪ್‌ ಸಂಸ್ಥೆಯ ಆತ್ಮವಿಶ್ವಾಸವನ್ನು ಇದು ಮತ್ತಷ್ಟು ಬಲಪಡಿಸಿದೆ. ಉತ್ಪನ್ನದ ಅಭಿವೃದ್ಧಿಗೆ ಬೇಕಾಗಿರುವ ಉದ್ಯಮಗಳ ಅಗತ್ಯತೆಗಳ ಬಗ್ಗೆ ಈ ಸ್ಪರ್ಧಾ ವೇದಿಕೆ ಅಮೂಲ್ಯವಾದ ಮಾರ್ಗದರ್ಶನವನ್ನು ನಮಗೆ ನೀಡಿದೆ. ಪ್ಲಾಸ್ಟಿಕ್-ಮುಕ್ತ ಮತ್ತು ಆಹಾರ ವಿತರಣೆಗೆ ಸೂಕ್ತವಾದ ಪ್ಯಾಕೇಜಿಂಗ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವತ್ತ ಗಮನಹರಿಸಿರುವ ಇತರೆ ಸ್ಟಾರ್ಟ್‌ಅಪ್‌ಗಳಿಂದಲೂ ಕಲಿಯಲು ಈ ವೇದಿಕೆ ಅನುಕೂಲ ಮಾಡಿಕೊಟ್ಟಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಪ್ಯಾಕಥಾನ್ ನಲ್ಲಿ 21 ರಾಜ್ಯಗಳ 128 ಸಂಸ್ಥೆಗಳ ಸ್ಪರ್ಧಿಗಳು ಪಾಲ್ಗೊಂಡಿದ್ದರು. ಇದರಲ್ಲಿ 47 ಸ್ಟಾರ್ಟ್‌ಅಪ್‌ಗಳು ಮಹಿಳಾ ಉದ್ಯಮಿಗಳ ನೇತೃತ್ವದಲ್ಲಿದ್ದವು ಎನ್ನುವುದು ಉಲ್ಲೇಖಾರ್ಹ. ಆಹಾರ ತಯಾರಿಕಾ ಮತ್ತು ವಿತರಣಾ ಉದ್ಯಮದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿ, ಸಂಸ್ಥೆಗಳಿಗೆ ತಮ್ಮ ವೈಜ್ಞಾನಿಕ ನಾವೀನ್ಯತೆಗಳನ್ನು ಪ್ರದರ್ಶಿಸಲು 40 ಕ್ಕೂ ಹೆಚ್ಚು ಸ್ಟಾರ್ಟ್‌ಅಪ್‌ಗಳಿಗೆ ಇದು ಉತ್ತಮ ವೇದಿಕೆಯಾಗಿ ಮಾರ್ಪಟ್ಟಿತ್ತು. ಟಾಪ್ ೧೦ ಸ್ಟಾರ್ಟ್ ಅಪ್ ಗಳಲ್ಲಿ ಅಗ್ರಿಲೀಫ್ ಸಂಸ್ಥೆಯ ವಿಶಿಷ್ಟವಾದ ಪ್ಲಾಸ್ಟಿಕ್ ಮುಕ್ತ ಉತ್ಪನ್ನವನ್ನು ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಲಾಯಿತು.

ಪ್ಯಾಕಥಾನ್‌ ಸ್ಪರ್ಧೆಯಲ್ಲಿ ಅಗ್ರಿಲೀಫ್‌ ಸಂಸ್ಥೆಗೆ ಸಿಕ್ಕಿರುವ ಮಾನ್ಯತೆ ಹಾಗೂ ಪ್ರಶಸ್ತಿಯು ಆಹಾರ ವಿತರಣಾ ಉದ್ಯಮದಲ್ಲಿ ಸುಸ್ಥಿರ ಪ್ಯಾಕೇಜಿಂಗ್ ವ್ಯವಸ್ಥೆ ಹೆಚ್ಚುತ್ತಿರುವುದಕ್ಕೆ ಸಾಕ್ಷಿಯಾಗಿರುವುದು ಮಾತ್ರವಲ್ಲದೆ, ಈ ಕ್ಷೇತ್ರದಲ್ಲಿ ಗಮನಾರ್ಹ ಪರಿಣಾಮ ಬೀರುವ ನವೀನ ವೈಜ್ಞಾನಿಕ ಸ್ಟಾರ್ಟ್‌ಅಪ್‌ಗಳ ಸಾಮರ್ಥ್ಯವನ್ನು ಕೂಡ ಸಾರಿ ಹೇಳಿದೆ.

Related posts

ರಕ್ರೇಶ್ವರಿ ಪದವು ಅಂಗನವಾಡಿ
ಕಾರ್ಯಕರ್ತೆ ನಾಗವೇಣಿ ಅವರಿಗೆ
ಅತ್ಯುತ್ತಮ ಅಂಗನವಾಡಿ ಕಾರ್ಯಕರ್ತೆ ಜಿಲ್ಲಾ ಪ್ರಶಸ್ತಿಗೆ ಆಯ್ಕೆ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಉಜಿರೆ : ನೇಹಾ ಹೀರೆಮಠ ಹತ್ಯೆಯನ್ನು ಖಂಡಿಸಿ ಎಬಿವಿಪಿ ಬೆಳ್ತಂಗಡಿ ಘಟಕದಿಂದ ಕಪ್ಪುಪಟ್ಟಿ ಪ್ರದರ್ಶಿಸಿ, ರಸ್ತೆ ತಡೆದು ಪ್ರತಿಭಟನೆ

Suddi Udaya

ಬೆಳಾಲು: ಎರಡು ಗುಂಪುಗಳ ನಡುವೆ ಗಲಾಟೆ: ಪರಸ್ಪರ ಆರೋಪ ಹೊರಿಸಿ ಪೊಲೀಸರಿಗೆ ದೂರು

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸುರೇಂದ್ರ ಪೈ ನಿಧನ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya
error: Content is protected !!