30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಯೋಗ ಮತ್ತು ಅದಕ್ಕೆ ಸಂಬಂಧಿಸಿದ ಅಧ್ಯಯನಕ್ಕೆ ಮೀಸಲಾಗಿರುವ ಬೆಂಗಳೂರಿನ ಖ್ಯಾತ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನ ಖಾಸಗಿ ಡೀಮ್ಡ್ ವಿಶ್ವವಿದ್ಯಾನಿಲಯ ಇದರ ಸಂಸ್ಥಾಪಕರು ಹಾಗೂ ಇದರ ಉಪಕುಲಪತಿ ಹೆಚ್. ಆರ್ ನಾಗೇಂದ್ರ ಭೇಟಿ ನೀಡಿದರು.


ಉಪಕುಲಪತಿ ಹೆಚ್. ಆರ್ ನಾಗೇಂದ್ರ ಅವರು ಆಸ್ಪತ್ರೆಯ ವೈದ್ಯರನ್ನು ಮತ್ತು ಎಲ್ಲಾ ವಿಭಾಗದ ಮುಖ್ಯಸ್ಥರನ್ನು ಉದ್ದೇಶಿಸಿ ಮಾತನಾಡುತ್ತಾ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯು ಮಂಜುನಾಥ ಸ್ವಾಮಿಯ ಕೃಪೆ, ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮತ್ತು ಡಾ| ಹೇಮಾವತಿ ಹೆಗ್ಗಡೆಯವರ ಪ್ರೇರಣೆ ಹರ್ಷೇಂದ್ರ ಕುಮಾರ್ ಮತ್ತು ಸುಪ್ರಿಯಾ ಹರ್ಷೇಂದ್ರ ಕುಮಾರ್ ಇವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಅದ್ಭುತ ಸಂಸ್ಥೆ. ಕೋಟ್ಯಾಂತರ ರೂಪಾಯಿ ಖರ್ಚು ಮಾಡಿ ಪೂಜ್ಯರು ಒಂದು ಗ್ರಾಮೀಣ ಭಾಗದಲ್ಲಿ ಈ ಆಸ್ಪತ್ರೆ ನಿರ್ಮಿಸಿರುವ ಉದ್ದೇಶ ಲಾಭಕ್ಕಲ್ಲ ಅನ್ನುವುದು ಗೊತ್ತಾಗುತ್ತದೆ. ಇಲ್ಲಿನ ವೈದ್ಯಕೀಯ ಸೇವೆ ಅಮೋಘವಾದದ್ದು. ಡಯಾಲಿಸಿಸ್ ವಿಭಾಗದಲ್ಲಿ ನೀಡುತ್ತಿರುವ ಉಚಿತ ಡಯಾಲಿಸಿಸ್ ಸೇವೆ ಹಾಗೂ ಅಲ್ಲಿ ಅಳವಡಿಸಿರುವ ವ್ಯವಸ್ಥೆಯು ಅತ್ಯುತ್ತಮವಾಗಿದೆ ಎಂದರು. ವೈದ್ಯರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡುತ್ತಾ, ಯೋಗ, ಪ್ರಾಣಾಯಾಮ ಮತ್ತು ಜೀವನಶೈಲಿಯ ಬದಲಾವಣೆಯಿಂದ ರೋಗ ನಿವಾರಣೆ ಸಾಧ್ಯ ಎಂದರು.


ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್, ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನದ ಫೈನಾನ್ಸ್ ಡೈರೆಕ್ಟರ್ ಡಾ| ದಯಾನಂದ, ಯೋಗ ತರಬೇತುದಾರ ಡಾ| ಅಮಿತ್, ಕ್ಷೇಮವನದ ಮುಖ್ಯ ಕ್ಷೇಮಾಧಿಕಾರಿ ಡಾ| ನರೇಂದ್ರ, ಹಾಗೂ ಶಾಂತಿವನದ ಕಾರ್ಯದರ್ಶಿ ಸೀತಾರಾಮ ತೋಳ್ಪಡಿತ್ತಾಯ ಹಾಗೂ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರು ವಿಭಾಗ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ನೇಮಕ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್ ಇದರ ಮುಂದಾಳತ್ವದಲ್ಲಿ ದಾನಿಗಳ ನೆರವಿನಿಂದ ನಿರ್ಮಾಣಗೊಂಡ ಹೊಸಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಸಮಾಲೋಚನಾ ಸಭೆ: ಜನಜಾಗೃತಿ ವೇದಿಕೆ ಮೂಲಕ ಧರ್ಮಸ್ಥಳದಿಂದ ಆಗಿರುವ ಪರಿವರ್ತನೆ ಅಪರಿಮಿತ: ಪ್ರತಾಪ ಸಿಂಹ ನಾಯಕ್

Suddi Udaya

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
error: Content is protected !!