July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ರಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣರರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ ರೀತಿ ಪ್ರತಿ ವರ್ಷ ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಡೆದ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರವರು ದೇಶ ಕಾಯುವ ಸೈನಿಕರು ಹೇಗೆ ಕಾರ್ಯನಿರ್ವಹಿಸುತ್ತಾರೋ ಹಾಗೆಯೇ ದೇಹ ಕಾಯುವವರು ನಮ್ಮ ದಾದಿಯರು ಎಂದು ಅಭಿಪ್ರಾಯಪಟ್ಟರು ಮತ್ತು ದಾದಿಯರು ವೈದ್ಯಕೀಯ ಕ್ಷೇತ್ರದ ಆಧಾರ ಸ್ತಂಭ ಎಂದು ಅವರ ಸೇವೆಯನ್ನು ಶ್ಲಾಘಿಸಿದರು.

ಅತಿಥಿಯಾಗಿ ಆಗಮಿಸಿದ ಹಿರಿಯ ದಾದಿ ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಪ್ರಬೋಧಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ವಿಶ್ರಾಂತ ಜೀವನ ಸಾಗಿಸುತ್ತಿರುವ ಶ್ರೀಮತಿ ಗುಣವತಿಯವರು ಮಾತನಾಡುತ್ತ ದಾದಿಯರ ಕೆಲಸವೆಂದರೆ ದೇವರ ಪೂಜೆ ಮಾಡಿದಂತೆ, ಅತ್ಯಂತ ಪವಿತ್ರ ವಾದ ಮತ್ತು ನಿಜವಾದ ಅರ್ಥದಲ್ಲಿ ಸೇವೆ ಎಂದು ತನ್ನ 31 ವರ್ಷಗಳ ಅನುಭವಗಳನ್ನು ಸವಿಸ್ತಾರವಾಗಿ ತಿಳಿಸಿದರು.


ದಾದಿಯರ ದಿನಾಚರಣೆಯ ಪ್ರಸ್ತುತಿ ಮತ್ತು ಮಾಹಿತಿಯನ್ನು ಹಿರಿಯ ಸಿಸ್ಟರ್ ಶ್ರೀಮತಿ ಉಷಾ ಗೌಡ ವಿವರಿಸಿದರು.
ಎಲ್ಲ ದಾದಿಯರಿಗೂ ರ‍್ಸಿಂಗ್ ಸುಪರಿಟೆಂಡೆಂಟ್ ಸಿಸ್ಟೆರ್ ವಸಂತ ಕುಮಾರಿಯವರು ಕರ್ತವ್ಯದ ಪ್ರತಿಜ್ಞಾ ವಿಧಿ ಬೋಧಿಸಿದರು.
ದಾದಿಯರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸ್ಪರ್ಧೇ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು . ಡಾ. ಭಾರತಿ ಜಿ. ಕೆ ಧನ್ಯವಾದವಿತ್ತರು.

Related posts

ಬಾರ್ಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ರಾಜೇಶ್ ರೈ ಆಯ್ಕೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿ ರವರಿಂದ ಮತ ಚಲಾವಣೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಕುಂಟಿನಿ ಅಲ್-ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
error: Content is protected !!