23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

ಉಜಿರೆ: ಅಂತರಾಷ್ಟ್ರೀಯ ದಾದಿಯರ ದಿವಸವನ್ನು ಪ್ರತಿ ವರ್ಷ ಮೇ 12 ನೇ ರಂದು ಜಗತ್ತು ಕಂಡ ಅತ್ಯುತ್ತಮ ದಾದಿ ಫ್ಲೋರೆನ್ಸ್ ನೈಟಿಂಗೇಲ್ ಸ್ಮರಣರರ್ಥ ಆಚರಿಸಿ ಅವರನ್ನು ನೆನಪಿಸಿಕೊಳ್ಳುವುದು ವೈದ್ಯಕೀಯ ಕ್ಷೇತ್ರದ ಪರಂಪರೆ . ಅದೇ ರೀತಿ ಪ್ರತಿ ವರ್ಷ ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ ನಡೆಸಿಕೊಂಡು ಬರುತ್ತಿದ್ದು, ಈ ವರ್ಷ ನಡೆದ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಗೋಪಾಲಕೃಷ್ಣ ರವರು ದೇಶ ಕಾಯುವ ಸೈನಿಕರು ಹೇಗೆ ಕಾರ್ಯನಿರ್ವಹಿಸುತ್ತಾರೋ ಹಾಗೆಯೇ ದೇಹ ಕಾಯುವವರು ನಮ್ಮ ದಾದಿಯರು ಎಂದು ಅಭಿಪ್ರಾಯಪಟ್ಟರು ಮತ್ತು ದಾದಿಯರು ವೈದ್ಯಕೀಯ ಕ್ಷೇತ್ರದ ಆಧಾರ ಸ್ತಂಭ ಎಂದು ಅವರ ಸೇವೆಯನ್ನು ಶ್ಲಾಘಿಸಿದರು.

ಅತಿಥಿಯಾಗಿ ಆಗಮಿಸಿದ ಹಿರಿಯ ದಾದಿ ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಪ್ರಬೋಧಕರಾಗಿ ಮತ್ತು ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿ, ಪ್ರಸ್ತುತ ವಿಶ್ರಾಂತ ಜೀವನ ಸಾಗಿಸುತ್ತಿರುವ ಶ್ರೀಮತಿ ಗುಣವತಿಯವರು ಮಾತನಾಡುತ್ತ ದಾದಿಯರ ಕೆಲಸವೆಂದರೆ ದೇವರ ಪೂಜೆ ಮಾಡಿದಂತೆ, ಅತ್ಯಂತ ಪವಿತ್ರ ವಾದ ಮತ್ತು ನಿಜವಾದ ಅರ್ಥದಲ್ಲಿ ಸೇವೆ ಎಂದು ತನ್ನ 31 ವರ್ಷಗಳ ಅನುಭವಗಳನ್ನು ಸವಿಸ್ತಾರವಾಗಿ ತಿಳಿಸಿದರು.


ದಾದಿಯರ ದಿನಾಚರಣೆಯ ಪ್ರಸ್ತುತಿ ಮತ್ತು ಮಾಹಿತಿಯನ್ನು ಹಿರಿಯ ಸಿಸ್ಟರ್ ಶ್ರೀಮತಿ ಉಷಾ ಗೌಡ ವಿವರಿಸಿದರು.
ಎಲ್ಲ ದಾದಿಯರಿಗೂ ರ‍್ಸಿಂಗ್ ಸುಪರಿಟೆಂಡೆಂಟ್ ಸಿಸ್ಟೆರ್ ವಸಂತ ಕುಮಾರಿಯವರು ಕರ್ತವ್ಯದ ಪ್ರತಿಜ್ಞಾ ವಿಧಿ ಬೋಧಿಸಿದರು.
ದಾದಿಯರ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸ್ಪರ್ಧೇ ಮತ್ತು ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು . ಡಾ. ಭಾರತಿ ಜಿ. ಕೆ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಪೊಲೀಸರ ನೇತೃತ್ವದಲ್ಲಿ ಗಣೇಶೋತ್ಸವ ಮತ್ತು ಈದ್ ಮೀಲಾದ್ ಶಾಂತಿ ಸಭೆ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಾಂಗ್ರೆಸ್ ಚುನಾವಣಾ ಪೂರ್ವ ತಯಾರಿ ಮತ್ತು ಕಾರ್ಯಕರ್ತರ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಗೆ ಧರ್ಮಸ್ಥಳದ ಹೇಮಾವತಿ ವಿ ಹೆಗ್ಗಡೆ ಭೇಟಿ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ಹುಂಡಿ ಎಣಿಕೆ ವೇಳೆ ರೂ.40,000 ವಂಚನೆ ಸಂಶಯ: ಬ್ಯಾಂಕ್ ಸಿಬ್ಬಂದಿ ವಿರುದ್ಧ ಕೇಸು ದಾಖಲು

Suddi Udaya

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರಿಗೆ ನಡ ನಿವಾಸಿಗಳಿಂದ ಅಭಿನಂದನೆ

Suddi Udaya
error: Content is protected !!