22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಜೇಸಿ ಭವನ ಮಂಜುಶ್ರೀಯಲ್ಲಿ ಜೆಸಿಐ ಬೆಳ್ತಂಗಡಿಯ ಉದ್ದೇಶಿತ ಯೋಜನೆ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೆಸಿಐ ವಲಯ 15 ರ ಜೆಕಾಂ ಚೇರ್ಮನ್ ಮಂಗಳೂರಿನ ರೆಸ್ಟೋರೆಂಟ್ ಉದ್ಯಮಿ ಜೇಸಿ ಧೀರಾಜ್ ಬಿ ಉದ್ಯಾವರ್, ಜೆಕಾಂ ವಲಯ ಸಂಯೋಜಕ ಅಭಿಜಿತ್ ನಾಯ್ಕ್ ಹಾಗೂ ಜೆಕಾಂ ಕೊಚ್ ಅರುಣ್ ಪೀಟರ್ ಪಿಂಟೊ ಕಾರ್ಯಾಗಾರ ನಡೆಸಿಕೊಟ್ಟು ಇದೊಂದು ಜೇಸಿ ಹಾಗೂ ಜೇಸಿಯೇತರ ಉದ್ಯಮಿಗಳು, ವರ್ತಕರು, ವೈದ್ಯರು, ವಕೀಲರು ಲೆಕ್ಕ ಪರಿಶೋಧಕರು ಮುಂತಾದ ವ್ಯವಹಾರಸ್ಥರ ಕೊಂಡಿಯಾಗಿ ಕೆಲಸ ಮಾಡುತ್ತಿದ್ದು ರಾಷ್ಟ್ರೀಯ ಅಂತರಾಷ್ಟ್ರೀಯ ಜಾಲವಾಗಿದೆ ಮತ್ತು ಜೆಕಾಂ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.


ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಬೆಳ್ತಂಗಡಿಯಲ್ಲಿ ಜೆಕಾಂ ಘಟಕವನ್ನು ಸ್ಥಾಪಿಸುವ ಬಗ್ಗೆ ಇಚ್ಛೆ ಹೊಂದಿದ್ದು ಶೀಘ್ರವೇ ಉದ್ಘಾಟಿಸಿಸುವ ಬಗ್ಗೆ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರುಗಳಾದ ತುಕಾರಾಮ್ ಬಿ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ್ ಲಾೖಲ, ಅಭಿನಂದನ್ ಹರೀಶ್ ಹಾಗೂ ಜೆಸಿಐ ಬೆಳ್ತಂಗಡಿಯ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜೇಸಿ ಪ್ರಶಾಂತ್ ಲಾೖಲ ಇವರು ವೇದಿಕೆ ಆಹ್ವಾನಿಸಿದರೆ ಜೆಸಿ ಹೇಮಾವತಿ ಕೆ ಇವರು ಸಂಪನ್ಮೂಲಗಳ ವ್ಯಕ್ತಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಜೇಸಿ ಪ್ರಮೋದ್ ಕೆ ಇವರು ಸಭೆಗೆ ಧನ್ಯವಾದ ಸಲ್ಲಿಸಿದರು. ಘಟಕಾಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭೆಯನ್ನು ಉಪಹಾರಕ್ಕಾಗಿ ಮುಂದೂಡಿದರು.

Related posts

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘಕ್ಕೆ ಎಸ್.ಸಿ.ಡಿ. ಸಿ.ಸಿ ಬ್ಯಾಂಕಿನಿಂದ ಸಾಧನಾ ಶ್ರೇಷ್ಟ್ರ ಪ್ರಶಸ್ತಿ

Suddi Udaya

ಮಚ್ಚಿನ: ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮಂಗಳೂರುನಲ್ಲಿ ಪ್ರಜಾಧ್ವನಿ ಯಾತ್ರೆ : ಬೆಳ್ತಂಗಡಿ ಯಲ್ಲಿ ಪೂರ್ವ ಸಮಾಲೋಚನಾ ಸಭೆ

Suddi Udaya

ನಾಳ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ ಹಾಗೂ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

Suddi Udaya
error: Content is protected !!