September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿಯ ಉದ್ದೇಶಿತ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆ ಬಗ್ಗೆ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಜೇಸಿ ಭವನ ಮಂಜುಶ್ರೀಯಲ್ಲಿ ಜೆಸಿಐ ಬೆಳ್ತಂಗಡಿಯ ಉದ್ದೇಶಿತ ಯೋಜನೆ ‘ಜೇಸಿ ಛೇಂಬರ್ ಆಫ್ ಕಾಮರ್ಸ್’ ಸ್ಥಾಪನೆಯ ಬಗ್ಗೆ ಮಾಹಿತಿ ಕಾರ್ಯಾಗಾರ ಹಾಗೂ ವಿಚಾರ ವಿನಿಮಯ ಕಾರ್ಯಕ್ರಮ ನಡೆಯಿತು.

ಜೆಸಿಐ ಬೆಳ್ತಂಗಡಿಯ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಸ್ವಾಗತಿಸಿದರು. ಜೆಸಿಐ ವಲಯ 15 ರ ಜೆಕಾಂ ಚೇರ್ಮನ್ ಮಂಗಳೂರಿನ ರೆಸ್ಟೋರೆಂಟ್ ಉದ್ಯಮಿ ಜೇಸಿ ಧೀರಾಜ್ ಬಿ ಉದ್ಯಾವರ್, ಜೆಕಾಂ ವಲಯ ಸಂಯೋಜಕ ಅಭಿಜಿತ್ ನಾಯ್ಕ್ ಹಾಗೂ ಜೆಕಾಂ ಕೊಚ್ ಅರುಣ್ ಪೀಟರ್ ಪಿಂಟೊ ಕಾರ್ಯಾಗಾರ ನಡೆಸಿಕೊಟ್ಟು ಇದೊಂದು ಜೇಸಿ ಹಾಗೂ ಜೇಸಿಯೇತರ ಉದ್ಯಮಿಗಳು, ವರ್ತಕರು, ವೈದ್ಯರು, ವಕೀಲರು ಲೆಕ್ಕ ಪರಿಶೋಧಕರು ಮುಂತಾದ ವ್ಯವಹಾರಸ್ಥರ ಕೊಂಡಿಯಾಗಿ ಕೆಲಸ ಮಾಡುತ್ತಿದ್ದು ರಾಷ್ಟ್ರೀಯ ಅಂತರಾಷ್ಟ್ರೀಯ ಜಾಲವಾಗಿದೆ ಮತ್ತು ಜೆಕಾಂ ಹೇಗೆ ಕಾರ್ಯ ನಿರ್ವಹಿಸುತ್ತದೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದರು.


ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದ ಜೆಸಿಐ ಬೆಳ್ತಂಗಡಿಯ ಪೂರ್ವಾಧ್ಯಕ್ಷರುಗಳು ಹಾಗೂ ಸದಸ್ಯರು ಬೆಳ್ತಂಗಡಿಯಲ್ಲಿ ಜೆಕಾಂ ಘಟಕವನ್ನು ಸ್ಥಾಪಿಸುವ ಬಗ್ಗೆ ಇಚ್ಛೆ ಹೊಂದಿದ್ದು ಶೀಘ್ರವೇ ಉದ್ಘಾಟಿಸಿಸುವ ಬಗ್ಗೆ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಪೂರ್ವಾಧ್ಯಕ್ಷರುಗಳಾದ ತುಕಾರಾಮ್ ಬಿ, ಚಿದಾನಂದ ಇಡ್ಯಾ, ವಸಂತ ಶೆಟ್ಟಿ ಶ್ರದ್ಧಾ, ಕಿರಣ್ ಕುಮಾರ್ ಶೆಟ್ಟಿ, ಪ್ರಶಾಂತ್ ಲಾೖಲ, ಅಭಿನಂದನ್ ಹರೀಶ್ ಹಾಗೂ ಜೆಸಿಐ ಬೆಳ್ತಂಗಡಿಯ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಜೇಸಿ ಪ್ರಶಾಂತ್ ಲಾೖಲ ಇವರು ವೇದಿಕೆ ಆಹ್ವಾನಿಸಿದರೆ ಜೆಸಿ ಹೇಮಾವತಿ ಕೆ ಇವರು ಸಂಪನ್ಮೂಲಗಳ ವ್ಯಕ್ತಿಗಳನ್ನು ಸಭೆಗೆ ಪರಿಚಯಿಸಿದರು. ಕಾರ್ಯದರ್ಶಿ ಜೇಸಿ ಪ್ರಮೋದ್ ಕೆ ಇವರು ಸಭೆಗೆ ಧನ್ಯವಾದ ಸಲ್ಲಿಸಿದರು. ಘಟಕಾಧ್ಯಕ್ಷೆ ಜೇಸಿ ಆಶಾಲತಾ ಪ್ರಶಾಂತ್ ಸಭೆಯನ್ನು ಉಪಹಾರಕ್ಕಾಗಿ ಮುಂದೂಡಿದರು.

Related posts

ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಪ್ರಸನ್ನ ಶಿಕ್ಷಣ ಸಂಸ್ಥೆಗೆ ಭೇಟಿ

Suddi Udaya

ಪಡ್ಡಂದಡ್ಕ ಸರಿಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಪುಸ್ತಕ ವಿತರಣೆ

Suddi Udaya

ಮೇ 19: ಬೆಳ್ತಂಗಡಿ ಶಾಂತಿಶ್ರೀ ಜೈನ ಮಹಿಳಾ ಸಮಾಜ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕೆರೆ ಎಕ್ಸೆಲ್ ಕೋಚಿಂಗ್ ಅಕಾಡೆಮಿಯಲ್ಲಿ ವಾರಾಂತ್ಯದ ತರಗತಿ

Suddi Udaya

ಪೆರಿಂಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಎನ್. ಸೀತಾರಾಮ ರೈ, ಉಪಾಧ್ಯಕ್ಷರಾಗಿ ವಿಠಲ ಸಿ ಪೂಜಾರಿ ಆಯ್ಕೆ

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಬೆಸ್ಟ್ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya
error: Content is protected !!