25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಾರತೀಯ ಸೈನ್ಯದ ಅಭ್ಯುದಯಕ್ಕಾಗಿ ಸೀಯಾಳಭಿಷೇಕದ ಮೂಲಕ ವಿಶೇಷ ಪ್ರಾರ್ಥನೆ

ಕಲ್ಮಂಜ: ಇತ್ತೀಚೆಗೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕ ಯುವಕರ ಕೊಲೆ ಮಾಡಿ ದೇಶದ ನಿದ್ದೆಗೆಡಿಸಿದ
ಪಾಪಿ ಪಾಕಿಸ್ಥಾನದ ವಿರುದ್ಧ ಭಾರತೀಯ ಸೇನೆಯು ಕೈಗೊಂಡ ಆಪರೇಷನ್ ಸಿಂಧೂರದಲ್ಲಿ ಭಾರತಾಂಬೆಯ ರಕ್ಷಣೆಗಾಗಿ ಎದೆಯೊಡ್ಡಿ ಹೋರಾಡಿ ಪಾಪಿ ಪಾಕಿಸ್ತಾನಿ ಸರಕಾರಕ್ಕೆ ತಕ್ಕ ಶಾಸ್ತಿಯನ್ನು ಮಾಡಿದ ಆ ಮೂಲಕ ಭಯೋತ್ಪಾದನೆಯನ್ನು ಈ ನೆಲದಿಂದಲೇ ನಿರ್ಮೂಲನೆ ಮಾಡುವ ಸಂಕಲ್ಪ ಮಾಡಿದ ಭಾರತೀಯ ಸೈನ್ಯಕ್ಕೆ ಇನ್ನಷ್ಟು ಶಕ್ತಿಯನ್ನು ಶ್ರೀ ದೇವರು ನೀಡಲಿ ಎಂಬ ಸದಾಶಯದಿಂದ ಮೇ 12 ರಂದು ಶ್ರೀ ಲೋಕನಾಥೇಶ್ವರ ದೇವಸ್ಥಾನ ನಿಡಿಗಲ್ ಇಲ್ಲಿ ಸಿಯಾಳಭಿಷೇಕ ಮಾಡುವ ಮೂಲಕ ದೇಶದ ಒಳಿತಿಗಾಗಿ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಗುರುರಾಜ್ ಗುರಿಪಳ್ಳ, ಜಾತ್ರೋತ್ಸವ ಸಮಿತಿ ಅಧ್ಯಕ್ಷ ಪಾಂಡುರಂಗ ಮರಾಠೆ, ಅರ್ಚಕರು, ಸಮಿತಿ ಸದಸ್ಯರುಗಳು ಹಾಗೂ ಊರವರು ಉಪಸ್ಥಿತರಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಮಹಿಳಾ ಕಾಂಗ್ರೆಸ್ ಘಟಕದ ಸಭೆ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಗೋ ರಥ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರಿಂದ ಗೋ ರಥ ಯಾತ್ರೆಗೆ ಶುಭ ಹಾರೈಕೆ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!