23.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಕುವೆಟ್ಟು ಗ್ರಾ.ಪಂ. ಅಧ್ಯಕ್ಷರಿಂದ ವಿವಾದಿತ ಹೇಳಿಕೆ : ಎಸ್.ಡಿ.ಟಿ.ಯು ವತಿಯಿಂದ ದೂರು ದಾಖಲು

ಬೆಳ್ತಂಗಡಿ: ಗುರುವಾಯನಕೆರೆಯ ಬಂಟರ ಭವನದಲ್ಲಿ ನಡೆದ “ಸುಹಾಸ್ ಶೆಟ್ಟಿ ನುಡಿ ನಮನ” ಕಾರ್ಯಕ್ರಮದಲ್ಲಿ ಕುವೆಟ್ಟು ಪಂಚಾಯತ್ ಅಧ್ಯಕ್ಷೆ ಭಾರತಿ ಶೆಟ್ಟಿಯವರು ಮುಸ್ಲಿಂ ಆಟೋ ಚಾಲಕರ ಬಗ್ಗೆ ಮಾತನಾಡಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುವುದರ ಬಗ್ಗೆ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ಸೋಶಿಯಲ್ ಟ್ರೇಡ್ ಯೂನಿಯನ್ ಗುರುವಾಯನಕೆರೆ ಇದರ ಅಧ್ಯಕ್ಷರಾದ ಅಬ್ದುಲ್ ರಹಮಾನ್ ಬೆಳ್ತಂಗಡಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಿದರು.

ಮುಸ್ಲಿಂ ಆಟೋ ರಿಕ್ಷಾ ಚಾಲಕರ ಬಗ್ಗೆ ಹಾಗೂ ಮುಸ್ಲಿಂ ಅಂಗಡಿಯಗಳಲ್ಲಿ ವ್ಯಾಪಾರ-ವ್ಯವಹಾರ
ಮಾಡುವ ವಿಷಯದಲ್ಲಿ ಹಿಂದು-ಮುಸ್ಲಿಂ ಎಂದು ವಿಭಜಿಸಿ, ಸಮಾಜದಲ್ಲಿ ಶಾಂತಿ-ಸುವ್ಯವಸ್ಥೆಗೆ ದಕ್ಕೆ ತರುವಂತಹ ಭಾಷಣವನ್ನು ಮಾಡಿರುವವರ ವಿರುದ್ದ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಬೇಕಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಧರ್ಭದಲ್ಲಿ SDTU ಘಟಕದ ಇದರ ಪದಾಧಿಕಾರಿಗಳು ಹಾಗು ಹಿರಿಯ ಆಟೋ ಚಾಲಕರು ಉಪಸ್ಥಿತರಿದ್ದರು.

Related posts

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ನರೇಗಾ ಮತ್ತು ತೆರಿಗೆ ವಸೂಲಾತಿಯಲ್ಲಿ ಗುರಿ ಸಾಧನೆ ಮಾಡಿದವರಿಗೆ ಸನ್ಮಾನ

Suddi Udaya

ಯಕ್ಷದ್ರುವ ಪಟ್ಲ ಫೌಂಡೇಶನ್ ಮಂಗಳೂರು ಬೆಳ್ತಂಗಡಿ ಘಟಕದ ಸಹಯೋಗದಲ್ಲಿ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಅಭಿಯಾನ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya
error: Content is protected !!