25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

ಬೆಳ್ತಂಗಡಿ : ಲಾಯಿಲ ಸೈಂಟ್ ಮೇರಿಸ್ ವಿದ್ಯಾಸಂಸ್ಥೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 614 ಮಾರ್ಕ್ಸ್ ಪಡೆದು ಮೂರನೇ ರ್‍ಯಾಂಕ್ ಪಡೆದ ವಿದ್ಯಾರ್ಥಿನಿ ಕುಮಾರಿ ಎಂ ಎಸ್ ದೇವಿಯನ್ನು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಮೇ 12 ರಂದು ನಡೆದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಸ್ವಾಮಿ ದೇವರ ಪೂಜೆಯ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಎಂಎಸ್ ದೇವಿಯ ಮಾತಾ ಪಿತೃಗಳು, ರಾಯರ ಮಠದಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದು ಕುಮಾರಿ ದೇವಿ ರಾಯರ ಮಠದಲ್ಲಿ ವಿದ್ಯುತ್ ಬೆಳಕಿನಲ್ಲಿ ನಿರಂತರ ಅಭ್ಯಾಸವನ್ನು ಮಾಡುತ್ತಿದ್ದು ಯಾವುದೇ ಟ್ಯೂಷನ್ ಇಲ್ಲದೆ ಓದಿ ಈ ಮಟ್ಟಕ್ಕೆ ಏರಿದ್ದು ಇಲ್ಲಿಯ ಪ್ರತಿಷ್ಠಿತ ಎಕ್ಸೆಲ್ ಕಾಲೇಜಿನ ಆಡಳಿತ ವರ್ಗ ಕುಮಾರಿ ದೇವಿ ಯನ್ನು ಮನೆಗೆ ಬಂದು ಅಭಿನಂದಿಸಿದ್ದು, ತಮ್ಮ ಕಾಲೇಜಿನಲ್ಲಿ ಮುಂದಿನ ವಿದ್ಯಾಭ್ಯಾಸಕ್ಕಾಗಿ ಸೀಟನ್ನು ಕಾದಿರಿಸಿದ್ದಾರೆ. ಆಕೆಯ ಭವಿಷ್ಯ ಉಜ್ವಲವಾಗಿರಲಿ, ಎಂದು ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಪೀತಾಂಬರ ಹೇರಾಜೇ ಯವರು ಅಭಿನಂದಿಸಿ ಶುಭ ಹಾರೈಸಿದರು.

ವಿಶೇಷವಾಗಿ ಭಾರತದ ಸೈನಿಕರ ಕ್ಷೇಮದ ಬಗ್ಗೆ ಮುಖ್ಯ ಅರ್ಚಕ ರಾಘವೇಂದ್ರ ಬಾಂಗ್ಯಣ್ಣಾಯರು ವಿಶೇಷ ಪ್ರಾರ್ಥನೆ ಸಲ್ಲಿಸಿದರು . ಈ ಸಂದರ್ಭದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಸಂತ ಸುವರ್ಣ , ಉಪಾಧ್ಯಕ್ಷ ಮಹಾಬಲ ಶೆಟ್ಟಿ , ಕೋಶಾಧಿಕಾರಿ ಶ್ರವಣ್ ರಾಜ್, ಟ್ರಸ್ಟಿಗಳಾದ ಜಯರಾಮ ಬಂಗೇರ, ಶ್ರೀಮತಿ ಉಮಾ ರಾವ್, ಶ್ರೀಮತಿ ತಾರಾ ಜಗನ್ನಾಥ್, ಪದ್ಮ ಕುಮಾರ್, ,ಉದಯ ಲಾಯಿಲ, ಭಾಸ್ಕರ್ ರೆಂಕೆದಗುತ್ತು, ಸುರೇಂದ್ರ ಬಂಗೇರ, ಕೃಷ್ಣ ಶೆಟ್ಟಿ, ಬಂಗಾರು, ವಿದ್ಯಾರ್ಥಿನಿಯ ತಂದೆ ರಾಮಸ್ವಾಮಿ ತಾಯಿ ರಾಧಾಮಣಿ, ಹಾಗೂ ಇತರ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು. .

Related posts

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ

Suddi Udaya

ಕೊಯ್ಯೂರು: ಹರ್ಪಳದಲ್ಲಿ ಅಡ್ಡಲಾಗಿ ಬಿದ್ದ ಮರಗಳ ತೆರವು ಕಾರ್ಯ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಸಂಘದ 28ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಆಟೋಟ ಸ್ಪರ್ಧೆ

Suddi Udaya

ಬಳಂಜ ಬಿಜೆಪಿ ಬೂತ್ ಸಮಿತಿ‌ ಅಧ್ಯಕ್ಷರಾಗಿ ಗಣೇಶ್ ದೇವಾಡಿಗ, ಕಾರ್ಯದರ್ಶಿಯಾಗಿ ಪ್ರಕಾಶ್ ಪೂಜಾರಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕದ ಪದಗ್ರಹಣ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಸ್ವಾತಂತ್ರ್ಯ ದಿನಾಚರಣೆ: ಆಕರ್ಷಕ ಪಥಸಂಚಲನ

Suddi Udaya
error: Content is protected !!