32.2 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉದ್ಯೋಗಾವಕಾಶಗಳನ್ನು ಒದಗಿಸುವುದೇ ಗುರಿ – MIFSE ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಸಂಸ್ಥೆಗಳ ಜಾಗೃತಿ ಅಭಿಯಾನದ ವಾಹನ ತಾಲೂಕಿನಾದ್ಯಂತ ಮನೆ ಬಾಗಿಲಿಗೆ – ಚಾರ್ಮಾಡಿಯಿಂದ ಚಾಲನೆ

ಬೆಳ್ತಂಗಡಿ: ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಫೈರ್ ಅಂಡ್ ಸೇಫ್ಟಿ ಇಂಜಿನಿಯರಿಂಗ್ (MFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಬೆಳ್ತಂಗಡಿ ಇದೀಗ ಬೆಳ್ತಂಗಡಿಯಲ್ಲಿ ವೃತ್ತಿಪರ ಮತ್ತು ಪ್ರೊಫೆಶನಲ್ ಕೋರ್ಸ್ ಗಳಲ್ಲಿ ಡಿಪ್ಲೊಮಾ ಪಿಜಿ ಡಿಪ್ಲೋಮಾ ಕೋರ್ಸುಗಳನ್ನು ಕೇಂದ್ರ ಸರ್ಕಾರ ಅಂಗೀಕೃತ NSDC ಪ್ರಮಾಣ ಪತ್ರದೊಂದಿಗೆ ಮಂಗಳೂರು ವಿಶ್ವವಿದ್ಯಾಲಯದ ಮಾನ್ಯತೆಯಿಂದ ವಿವಿಧ ಕೋರ್ಸು ಗಳ ಬಗ್ಗೆ ಬೆಳ್ತಂಗಡಿ ತಾಲೂಕಿನ ಜನತೆಗೆ ಮತ್ತು ವಿದ್ಯಾರ್ಥಿಗಳಿಗೆ ವಿಶೇಷ ಮಾಹಿತಿ ಮತ್ತು ಪ್ರಯೋಜನ ಹಾಗೂ ಉದ್ಯೋಗಾವಕಾಶದ ಪ್ರಯೋಜನಗಳನ್ನು ಪಡೆಯಬಹುದು ಎಂಬಿತ್ಯಾದಿ ವಿಷಯಗಳ ತರಬೇತಿ ವಿಷಯಗಳ ಜಾಹೀರಾತು ವಾಹನಕ್ಕೆ ಬೆಳ್ತಂಗಡಿ ತಾಲ್ಲೂಕಿನಾದ್ಯಂತ ಭವ್ಯ ಚಾಲನೆಯನ್ನು ಮೇ 12 ರಂದು ಬೆಳ್ತಂಗಡಿಯ ಚಾರ್ಮಾಡಿಯಿಂದ ಆರಂಭಗೊಂಡಿತು.

ಜಾಹೀರಾತು ವಾಹನದ ಉದ್ಘಾಟನೆ ಮತ್ತು ಚಾಲನೆಯನ್ನು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಹಿರಿಯ ಸಮಾಜಸೇವಕ ಚಾರ್ಮಾಡಿಯ ಹಸನಬ್ಬ ನೆರವೇರಿಸಿ ಮಾತನಾಡಿ “ಇಂತಹ ತರಬೇತಿ ಸಂಸ್ಥೆಗಳು ಗ್ರಾಮೀಣ ಯುವಕರಿಗೆ ಹೊಸ ದಿಕ್ಕು ತೋರಿಸುತ್ತವೆ. ಪ್ರಸಕ್ತ ಸನ್ನಿವೇಶದಲ್ಲಿ ಪ್ರೊಫೆಶನಲ್ ಕೋರ್ಸ್ ಗಳು ಅತೀ ಅಗತ್ಯ ಇಂತಹ ಸೇವೆಗಳನ್ನು ನೀಡುವ ಎಂ ಜಿ ತಲ್ಹತ್ ಸವಣಾಲು ಇವರು ಮತ್ತು ಇವರ ತಂಡದ ಸೇವೆ ಶ್ಲಾಘನೀಯ” ಎಂದು ಮೆಚ್ಚುಗೆ ಸೂಚಿಸಿದರು.

ಚಾಲನಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಸಂಸ್ಥಾಪಕರಾದ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಎಂ. ಜಿ. ತಲ್ಹತ್ ಸವಣಾಲು, ಸಂಸ್ಥೆಯ ಮತ್ತೊಬ್ಬ ನಿರ್ದೇಶಕರಾದ ಮುಹಮ್ಮದ್ ತೌಸೀಫ್ ಕಕ್ಕಿಂಜೆ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಿತು. ಮುಹಮ್ಮದ್ ಅಝ್ಮಾನ್ ಕಕ್ಕಿಂಜೆ, ಉದ್ಯಮಿ ಯುರೋಪ್ ಜಾರ್ಜ್ , ಸುಪ್ರೀಮ್ ಎಲೆಕ್ಟ್ರಾನಿಕ್ಸ್ ಗುರುವಾಯನಕೆರೆ ಇದರ ಉನೈಸ್ ಸುಪ್ರೀಮ್ ಹಾಗೂ ಸಾರ್ವಜನಿಕರು, ಊರಿನ ಸರ್ವ ಸಾರ್ವಜನಿಕರು ಉಪಸ್ಥಿತರಿದ್ದರು.

ಜಾಹೀರಾತು ವಾಹನವು ನವೀನ ರೀತಿಯಲ್ಲಿ ವಿನ್ಯಾಸಗೊಳ್ಳಿಸಿದ್ದು, ವಿವಿಧ ವೃತ್ತಿಪರ ಕೋರ್ಸ್‌ಗಳ ವಿವರ, ಸಂಸ್ಥೆಯ ಸಂಪರ್ಕ ಮಾಹಿತಿ ಮತ್ತು ಭವಿಷ್ಯ ನವೀನ ಉದ್ಯೋಗಾವಕಾಶಗಳ ಕುರಿತು ಮಾಹಿತಿ ಹೊಂದಿದೆ. ಇದೇ ವೇಳೆ ಉದ್ಘಾಟನಾ ಕೊಡುಗೆಯಡಿಯಲ್ಲಿ ಕೆಲವು ಕೋರ್ಸ್‌ಗಳಿಗೆ ವಿಶೇಷ ರಿಯಾಯಿತಿ ಘೋಷಿಸಲಾಯಿತು.

ಅನುಗ್ರಹ ಟ್ರೈನಿಂಗ್ ಕಾಲೇಜು ಸಾವಿರಾರು ಯುವಕರಿಗೆ ಉಚಿತ ಮತ್ತು ಕಡಿಮೆ ಶುಲ್ಕದಲ್ಲಿ ವೃತ್ತಿಪರ ತರಬೇತಿಯನ್ನು ನೀಡುತ್ತಿರುವ ಸಂಸ್ಥೆಯಾಗಿದ್ದು, ಇದರ ಸೇವೆಗಳು ರಾಜ್ಯದಾದ್ಯಂತ ಪ್ರಭಾವ ಬೀರುತ್ತಿವೆ.

ಆಸಕ್ತ ವಿದ್ಯಾರ್ಥಿಗಳು ದಾಖಲಾತಿಗೆ ಅನುಗ್ರಹ ಟ್ರೈನಿಂಗ್ ಕಾಲೇಜು, ಶ್ರೀ ರಾಮ ಕಾಂಪ್ಲೆಕ್ಸ್, ಸಂತೆಕಟ್ಟೆ, ಬೆಳ್ತಂಗಡಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಮಾಹಿತಿಗಾಗಿ: 8861112182

Related posts

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಮಂಜುನಾಥ್ ಗೌಡ, ರಾಷ್ಟ್ರೀಯ ಯುವ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಭೇಟಿ

Suddi Udaya

ತೋಟತ್ತಾಡಿ : 9ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಪೂಜೋತ್ಸವ

Suddi Udaya

ಸಾಹಿತ್ಯ ಸಮ್ಮೇಳನದ ಸಂಯೋಜನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ: ಕನ್ನಡ ಸಾಹಿತ್ಯ ಸಮ್ಮೇಳನವು ಸುವರ್ಣ ಕರ್ನಾಟಕದ ಆಶಯವನ್ನು ಬಿಂಬಿಸುವಂತಿರಲಿ: ಶಾಸಕ ಹರೀಶ್ ಪೂಂಜ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಹಳೆಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ವಿದ್ಯಾಭ್ಯಾಸಕ್ಕಾಗಿ ಸಹಾಯಧನ ಹಸ್ತಾಂತರ

Suddi Udaya
error: Content is protected !!