July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

ಲಾಯಿಲ ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಇದರ ಸಹಯೋಗದೊಂದಿಗೆ ಮೇ 14 ರಂದು ಲಾಯಿಲ ಗ್ರಾಮ ಪಂಚಾಯತ್ ಭಾರತ್ ಮಾತಾ ಸಭಾಭವನದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ಮಕ್ಕಳೊಂದಿಗೆ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.


ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ಅರವಿಂದ ಕುಮಾರ್, ಜಯಂತಿ, ರಜನಿ ಎಂ.ಆರ್, ಕಾರ್ಯದರ್ಶಿ ತಾರಾನಾಥ ನಾಯ್ಕ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಸುಪ್ರಿತಾ ಎಸ್ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.


ಕಾರ್ಯದರ್ಶಿ ತಾರಾನಾಥ ನಾಯ್ಕ ಮಕ್ಕಳನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿದರು ಹಾಗೂ ಅಧ್ಯಕ್ಷರು ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಎಸ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಗ್ರಂಥಾಲಯ ಮೇಲ್ವಿಚಾರಕರಾದ ಹರ್ಷಿತಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿದರು. ಶಿಬಿರವು ಮೇ ೧೪ರಿಂದ ಮೇ ೨೦ರ ವರೆಗೆ ನಡೆಯಲಿರುವುದು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಉಜಿರೆ: ಕುಂಜರ್ಪ ನಿವಾಸಿ ತಿಮ್ಮಪ್ಪ ಪೂಜಾರಿ ನಿಧನ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಸ್ಟಾನ (ರಿ) ಪ್ರಾಯೋಜಿತ ಬಟ್ಟೆಯ ಕಸೂತಿ ಆರಿ ಕೌಶಲ್ಯ ಸ್ವ ಉದ್ಯೋಗ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಜೋಯಾಲುಕ್ಕಾಸ್ ಫೌಂಡೇಶನ್ ಟ್ರಸ್ಟ್ ವತಿಯಿಂದ ಮನೆ ಹಸ್ತಾಂತರ

Suddi Udaya

ಪೆರಾಲ್ದರಕಟ್ಟೆ ಬದ್ರಿಯಾ ಜುಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!