September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ


ವೇಣೂರು: ಹೊಸಂಗಡಿ ಪಂಚಾಯತ್ ೩ನೇ ವಾರ್ಡ್ ಸದಸ್ಯ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಸದ್ರಿ ವಾರ್ಡ್ ನಿವಾಸಿ, ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ ಹಾಗೂ ಪೆರಿಂಜೆ ಹಾಲು ಉತ್ಪಾದಕ ಸಂಘದ ನಿರ್ದೇಶಕ ಆನಂದ ಕೊಡಂಗೇರಿ ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ ಪಂಚಾಯತ್ ವ್ಯಾಪ್ತಿ ಪಕ್ಷದ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಂದರ ಕೆ, ಶ್ರೀಮತಿ ಅಕ್ಕು, ಪೆರಿಂಜೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎನ್ ಸೀತಾರಾಮ ರೈ, ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ಹಿರಿಯರಾದ ಶಿವಪ್ಪ ಪೂಜಾರಿ ಕೊಡಂಗೇರಿ, ಪದ್ಮರಾಜ ಪೇರಿ, ಧರ್ಣಪ್ಪ ಪಡ್ಯಾರಬೆಟ್ಟ, ನಾಗೇಶ್ ಕೋಟ್ಯಾನ್ ಹೊಸಂಗಡಿ, ಚಂದ್ರಕಾAತ್, ಅರವಿಂದ ಶೆಟ್ಟಿ ಖಂಡಿಗ, ಸೂರಜ್ ಪೇರಿ, ಪಂಚಾಯತ್ ಸದಸ್ಯೆ ಶ್ರೀಮತಿ ಜೆ ಶಾಂತ, ಮಾಜಿ ಸದಸ್ಯೆ ಶ್ರೀಮತಿ ಸುಮತಿ, ವಿಜಯ ಶೆಟ್ಟಿ, ಪ್ರಶಾಂತ್ ನಾಯಕ್, ವಾಸುದೇವ ನಾಯ್ಕ್, ಕೆಪಿ ಬಶೀರ್ ಪಡ್ಡಂದಡ್ಕ, ಶೀನಪ್ಪ ಕೊಡಂಗೇರಿ, ರಾಗಿಣಿ ಪೇರಿ, ವಿಜಯ ದೆರಾರ್, ಗೋಪಾಲ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

ಪರೀಕ ಆತ್ರಾಡಿ ಮಸೀದಿಯಿಂದ ಶ್ರೀನಿವಾಸ ದೇವಸ್ಥಾನದವರೆಗೆ ಅಗಲೀಕರಣದೊಂದಿಗೆ ಡಾಮರೀಕರಣಕ್ಕೆ ಚಾಲನೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ನವಚೇತನ ಶಾಲೆಯ ದ್ವಿಗುಣ ಸಾಧನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಲಿಂಗ ಸಮಾನತಾ ಪ್ರೇರಣಾ ತಂಡದ ಸದಸ್ಯರಿಗೆ ಸಾಮರ್ಥ್ಯ ವರ್ಧನಾ ತರಬೇತಿ

Suddi Udaya

ಎಸ್‌ಡಿಟಿಯು ಆಟೋ ಯೂನಿಯನ್ ಬಾಜಾರ್ ಘಟಕ ಅಸ್ಥಿತ್ವಕ್ಕೆ

Suddi Udaya
error: Content is protected !!