ಲಾಯಿಲ ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಇದರ ಸಹಯೋಗದೊಂದಿಗೆ ಮೇ 14 ರಂದು ಲಾಯಿಲ ಗ್ರಾಮ ಪಂಚಾಯತ್ ಭಾರತ್ ಮಾತಾ ಸಭಾಭವನದಲ್ಲಿ ಮಕ್ಕಳ ಬೇಸಿಗೆ ಶಿಬಿರವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ಮಕ್ಕಳೊಂದಿಗೆ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿದರು.

ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ, ಸದಸ್ಯರಾದ ಅರವಿಂದ ಕುಮಾರ್, ಜಯಂತಿ, ರಜನಿ ಎಂ.ಆರ್, ಕಾರ್ಯದರ್ಶಿ ತಾರಾನಾಥ ನಾಯ್ಕ, ದ್ವಿತೀಯ ದರ್ಜೆ ಲೆಕ್ಕಸಹಾಯಕಿ ಸುಪ್ರಿತಾ ಎಸ್ ಶೆಟ್ಟಿ, ಪಂಚಾಯತ್ ಸಿಬ್ಬಂದಿಗಳು ಹಾಗೂ ಮಕ್ಕಳು, ಪೋಷಕರು ಉಪಸ್ಥಿತರಿದ್ದರು.

ಕಾರ್ಯದರ್ಶಿ ತಾರಾನಾಥ ನಾಯ್ಕ ಮಕ್ಕಳನ್ನು ಉದ್ದೇಶಿಸಿ ಪ್ರಾಸ್ತಾವಿಕ ನುಡಿದರು ಹಾಗೂ ಅಧ್ಯಕ್ಷರು ಮಕ್ಕಳಿಗೆ ಶುಭ ಹಾರೈಸಿದರು.
ಕಾರ್ಯಕ್ರಮವನ್ನು ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಸುಪ್ರೀತಾ ಎಸ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.
ಗ್ರಂಥಾಲಯ ಮೇಲ್ವಿಚಾರಕರಾದ ಹರ್ಷಿತಾ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಏರ್ಪಡಿಸಿದರು. ಶಿಬಿರವು ಮೇ ೧೪ರಿಂದ ಮೇ ೨೦ರ ವರೆಗೆ ನಡೆಯಲಿರುವುದು.