September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ


ವೇಣೂರು: ಹೊಸಂಗಡಿ ಪಂಚಾಯತ್ ೩ನೇ ವಾರ್ಡ್ ಸದಸ್ಯ ಹರಿಪ್ರಸಾದ್ ರವರ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ಘೋಷಣೆಯಾಗಿದ್ದು ಮೇ 14 ರಂದು ಸದ್ರಿ ವಾರ್ಡ್ ನಿವಾಸಿ, ಪೆರಿಂಜೆ ಸರಕಾರಿ ಶಾಲಾ ಮಾಜಿ ಮೇಲುಸ್ತುವಾರಿ ಅಧ್ಯಕ್ಷ ಹಾಗೂ ಪೆರಿಂಜೆ ಹಾಲು ಉತ್ಪಾದಕ ಸಂಘದ ನಿರ್ದೇಶಕ ಆನಂದ ಕೊಡಂಗೇರಿ ಚುನಾವಣಾಧಿಕಾರಿ ಗಣೇಶ್ ರಾಮಚಂದ್ರ ಭಟ್ ರವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರ.ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ನಗರ ಘಟಕ ಅಧ್ಯಕ್ಷ ಸತೀಶ್ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ ಪಂಚಾಯತ್ ವ್ಯಾಪ್ತಿ ಪಕ್ಷದ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಸುಂದರ ಕೆ, ಶ್ರೀಮತಿ ಅಕ್ಕು, ಪೆರಿಂಜೆ ಹಾಲು ಉತ್ಪಾದಕ ಸಹಕಾರ ಸಂಘದ ಅಧ್ಯಕ್ಷ ಎನ್ ಸೀತಾರಾಮ ರೈ, ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಇಸ್ಮಾಯಿಲ್ ಕೆ ಪೆರಿಂಜೆ, ಪ್ರಮುಖರಾದ ಹಿರಿಯರಾದ ಶಿವಪ್ಪ ಪೂಜಾರಿ ಕೊಡಂಗೇರಿ, ಪದ್ಮರಾಜ ಪೇರಿ, ಧರ್ಣಪ್ಪ ಪಡ್ಯಾರಬೆಟ್ಟ, ನಾಗೇಶ್ ಕೋಟ್ಯಾನ್ ಹೊಸಂಗಡಿ, ಚಂದ್ರಕಾAತ್, ಅರವಿಂದ ಶೆಟ್ಟಿ ಖಂಡಿಗ, ಸೂರಜ್ ಪೇರಿ, ಪಂಚಾಯತ್ ಸದಸ್ಯೆ ಶ್ರೀಮತಿ ಜೆ ಶಾಂತ, ಮಾಜಿ ಸದಸ್ಯೆ ಶ್ರೀಮತಿ ಸುಮತಿ, ವಿಜಯ ಶೆಟ್ಟಿ, ಪ್ರಶಾಂತ್ ನಾಯಕ್, ವಾಸುದೇವ ನಾಯ್ಕ್, ಕೆಪಿ ಬಶೀರ್ ಪಡ್ಡಂದಡ್ಕ, ಶೀನಪ್ಪ ಕೊಡಂಗೇರಿ, ರಾಗಿಣಿ ಪೇರಿ, ವಿಜಯ ದೆರಾರ್, ಗೋಪಾಲ ಸೇರಿದಂತೆ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ ಸಹಕರಿಸಿದರು.

Related posts

ನಿಡ್ಲೆ: ಬರೆಂಗಾಯ ನಿವಾಸಿ ಪ್ರಭಾಕರ ಆಚಾರ್ಯ ನಿಧನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಕಾಲೇಜು ಬಿಸಿಎ ವಿಭಾಗದಿಂದ ಎನಿಗ್ಮಾ-2024

Suddi Udaya

ಇಂದು (ಎ.12): ಅಳದಂಗಡಿಯಲ್ಲಿ ಹನುಮ ನಾಮ ಸ್ಮರಣೆ : ಹನುಮೋತ್ಸವ-2025, ಹನುಮ ಮಹಾಯಾಗ-ಕನ್ಯಾಡಿ ಶ್ರೀಗಳಿಗೆ ಮಹಾಭಿವಂದ್ಯ, ಹನುಮ ಶ್ರೀರಕ್ಷೆ ಧಾರಣೆ-ಲಂಕಾದಹನ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ನಾಗರಪಂಚಮಿ ವಿಶೇಷ ಪೂಜೆ

Suddi Udaya

ನೆರಿಯ ನಿವಾಸಿ ಶ್ವೇತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!