September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮೇ.14ರಂದು ದಸ್ತಗಿರಿ ಮಾಡಿದ್ದಾರೆ.

ಅಜರುದ್ದೀನ್ @ ಅಜರ್ @ ಅಜ್ಜು (29), ತಂದೆ: ಅಬೂಬಕ್ಕರ್, ವಾಸ: ಕಳವಾರು ಆಶ್ರಯ ಕಾಲೊನಿ, ಕಳವಾರು ಗ್ರಾಮ, ಮಂಗಳೂರು, ಅಬ್ದುಲ್ ಖಾದರ್ @ ನೌಫಲ್(24), ತಂದೆ: ಕೆ ಎಂ ನಜೀರ್, ವಾಸ: ಬದ್ರಿಯ ನಗರ, ಬೆಳಪು, ಕಾಪು, ಉಡುಪಿ ಜಿಲ್ಲೆ, ಹಾಲಿ ವಾಸ: ಜೈನಾಬಿ ಫ್ಲಾಟ್, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿ, ಬಟ್ಟೆ, ಮಂಗಳೂರು ಮತ್ತು ನೌಷಾದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ (39), ತಂದೆ: ದಿ.ನಸ್ರುದ್ದೀನ್, ವಿಳಾಸ: ಟಿ.ಕೆ.ಬಶೀರ್ ಅಪಾರ್ಟಮೆಂಟ್ 1ನೇ ಮಹಡಿ, ಸಿಟಿ ಲೈಟ್ ಹೊಟೇಲ್ ಹಿಂಭಾಗ, ಕುಂಪನಮಜಲು ರಸ್ತೆ, ಫರಂಗಿಪೇಟೆ, ಬಂಟ್ವಾಳ ತಾಲೂಕು, ಹಾಲಿ ವಾಸ: ಸೈಯದ್ ರವರ ಬಾಡಿಗೆ ಮನೆ, 1ನೇ ಮಹಡಿ, ಕೆ.ಆ‌ರ್.ಪುರಂ, ಹಾಸನ ಜಿಲ್ಲೆ ಇವರು ಬಂಧಿತರು. ಆರೋಪಿಗಳ ಪೈಕಿ ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿರುತ್ತಾನೆ. ಆರೋಪಿ ಅಬ್ದುಲ್ ಖಾದರ್ @ ನೌಫಲ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ.

ಈತನು ಈ ಹಿಂದೆ ಸುರತ್ಕಲ್, ಬಟ್ಟೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಆರೋಪಿಗಳಾದ ಅಬ್ದುಲ್ ಖಾದರ್ @ ನೌಫಲ್ ಮತ್ತು ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್‌ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿರುತ್ತದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ

Related posts

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya

ರೆಖ್ಯ: ಜಿ.ಪಂ. ಮಾಜಿ ಸದಸ್ಯ ಟಿ.ಕೆ ಮಹೇಂದ್ರನ್ ನಿಧನ

Suddi Udaya

ಸಂತ ತೆರೇಸಾ ಸಂಯುಕ್ತ ಪದವಿ ಪೂರ್ವ ಕಾಲೇಜಿನಲ್ಲಿ ಮಾದಕ ದ್ರವ್ಯ ಜಾಗೃತಿ ಕಾರ್ಯಾಗಾರ

Suddi Udaya

ರೂ. 27 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಸೂಳಬೆಟ್ಟು ಸ.ಕಿ. ಪ್ರಾಥಮಿಕ ಶಾಲಾ ವಿಭಾಗದ ನೂತನ ಕಟ್ಟಡ ಉದ್ಘಾಟನೆ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ: ನಿವೃತ್ತಿ ಹೊಂದಿದ ಪಂಪು ಚಾಲಕ ಕೊರಗಪ್ಪರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಗೆ ಸ್ವಿಟ್ಜರ್ಲೆಂಡ್‌ನ ಪ್ರತಿಷ್ಠಿತ ಡನ್‌ಸ್ಟರ್ ಬಿಸಿನೆಸ್ ಸ್ಕೂಲ್‌ನಿಂದ ಗೌರವ ಡಾಕ್ಟರೇಟ್ ಪ್ರದಾನ

Suddi Udaya
error: Content is protected !!