24.9 C
ಪುತ್ತೂರು, ಬೆಳ್ತಂಗಡಿ
May 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು.

ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು. ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇರುವುದರಿಂದ. ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸರು ಸಹಕರಿಸಿದರು.

Related posts

ಗೇರುಕಟ್ಟೆ: ಸ್ನೇಹ ಸಂಗಮ ಆಟೋ-ಚಾಲಕ ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಎಕ್ಸಲೆಂಟ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಹೊಸಂಗಡಿ ಗ್ರಾಮ ಪಂಚಾಯತಿಗೆ ಭೇಟಿ

Suddi Udaya

ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

Suddi Udaya

ಅ.31: ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ದೀಪಾವಳಿ ದೋಸೆಹಬ್ಬ ಹಾಗೂ ಗೋ ಪೂಜಾ ಉತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!