22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮೇ.14ರಂದು ದಸ್ತಗಿರಿ ಮಾಡಿದ್ದಾರೆ.

ಅಜರುದ್ದೀನ್ @ ಅಜರ್ @ ಅಜ್ಜು (29), ತಂದೆ: ಅಬೂಬಕ್ಕರ್, ವಾಸ: ಕಳವಾರು ಆಶ್ರಯ ಕಾಲೊನಿ, ಕಳವಾರು ಗ್ರಾಮ, ಮಂಗಳೂರು, ಅಬ್ದುಲ್ ಖಾದರ್ @ ನೌಫಲ್(24), ತಂದೆ: ಕೆ ಎಂ ನಜೀರ್, ವಾಸ: ಬದ್ರಿಯ ನಗರ, ಬೆಳಪು, ಕಾಪು, ಉಡುಪಿ ಜಿಲ್ಲೆ, ಹಾಲಿ ವಾಸ: ಜೈನಾಬಿ ಫ್ಲಾಟ್, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿ, ಬಟ್ಟೆ, ಮಂಗಳೂರು ಮತ್ತು ನೌಷಾದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ (39), ತಂದೆ: ದಿ.ನಸ್ರುದ್ದೀನ್, ವಿಳಾಸ: ಟಿ.ಕೆ.ಬಶೀರ್ ಅಪಾರ್ಟಮೆಂಟ್ 1ನೇ ಮಹಡಿ, ಸಿಟಿ ಲೈಟ್ ಹೊಟೇಲ್ ಹಿಂಭಾಗ, ಕುಂಪನಮಜಲು ರಸ್ತೆ, ಫರಂಗಿಪೇಟೆ, ಬಂಟ್ವಾಳ ತಾಲೂಕು, ಹಾಲಿ ವಾಸ: ಸೈಯದ್ ರವರ ಬಾಡಿಗೆ ಮನೆ, 1ನೇ ಮಹಡಿ, ಕೆ.ಆ‌ರ್.ಪುರಂ, ಹಾಸನ ಜಿಲ್ಲೆ ಇವರು ಬಂಧಿತರು. ಆರೋಪಿಗಳ ಪೈಕಿ ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿರುತ್ತಾನೆ. ಆರೋಪಿ ಅಬ್ದುಲ್ ಖಾದರ್ @ ನೌಫಲ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ.

ಈತನು ಈ ಹಿಂದೆ ಸುರತ್ಕಲ್, ಬಟ್ಟೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಆರೋಪಿಗಳಾದ ಅಬ್ದುಲ್ ಖಾದರ್ @ ನೌಫಲ್ ಮತ್ತು ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್‌ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿರುತ್ತದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ

Related posts

ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪ್ರಯುಕ್ತ ಹಸಿರುವಾಣಿ ಹೊರಕಾಣಿಕೆಗೆ ಚಾಲನೆ

Suddi Udaya

ತುಳುವ ಮಹಾಸಭೆ ಬೆಳ್ತಂಗಡಿ ತಾಲೂಕು ಸಂಚಾಲಕರಾಗಿ ಡಾ. ದಿವ ಕೊಕ್ಕಡ ಆಯ್ಕೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಉತ್ಸವ ಹಾಗೂ ಜಾತ್ರಾ ಮಹೋತ್ಸವ ಸಂಪನ್ನ

Suddi Udaya

ಜಿಲ್ಲಾಮಟ್ಟದ ರಸಪ್ರಶ್ನೆ: ವೇಣೂರು ಸ. ಪ.ಪೂ. ಕಾಲೇಜು (ಪ್ರೌಢಶಾಲಾ ವಿಭಾಗ ) ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
error: Content is protected !!