23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಕೆ.ಎಮ್.ಜೆ ಗುರುವಾಯನಕೆರೆ ಸರ್ಕಲ್ ಮಾಸಿಕ ಸಭೆ: ರಾಜ್ಯ ಕೌನ್ಸಿಲರ್ ಗಳಾಗಿ ಆಯ್ಕೆಯಾದ ಅಬ್ಬೋನು ಮದ್ದಡ್ಕ, ಉಮ್ಮರ್ ಮಾಸ್ಟರ್ ಗೆ ಗೌರವಾರ್ಪಣೆ.

ಬೆಳ್ತಂಗಡಿ: ಕರ್ನಾಟಕ ಮುಸ್ಲಿಮ್ ಜಮಾಆತ್ ನ ಗುರುವಾಯನಕೆರೆ ಸರ್ಕಲ್ ವ್ಯಾಪ್ತಿಯ ಯೂನಿಟ್ ಗಳ ಮಾಸಿಕ ಪ್ರಥಮ ಸಭೆಯು ಮದ್ದಡ್ಕ ನೂರುಲ್ ಹುದಾ ಜುಮ್ಮಾ ಮಸೀದಿಯ ಸಭಾಭವನದಲ್ಲಿ ಜರಗಿತು.
ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಅಲ್ ಫುರ್ಖಾನಿ
ವಹಿಸಿದ್ದರು. ಉಸ್ಮಾನ್ ಸಖಾಫಿ ದುವಾ ನೆರವೇರಿಸಿದರು. ಎನ್.ಎಸ್.ಉಮ್ಮರ್ ಮಾಸ್ಟರ್ ಪ್ರಸ್ತಾವನೆಗೈದರು.

ಗುರುವಾಯನಕೆರೆ ಸರ್ಕಲ್ ನಿಂದ ರಾಜ್ಯ ಸಮಿತಿಗೆ ಕೌನ್ಸಿಲರ್ ಆಗಿ ನೇಮಕಗೊಂಡ ಹಿರಿಯ ಮುಖಂಡರಾದ ಅಬ್ಬೋನು ಮದ್ದಡ್ಕ ಹಾಗೂ ಎನ್.ಎಸ್.ಉಮ್ಮರ್ ಮಾಸ್ಟರ್ ರವರನ್ನು ಗೌರವಿಸಲಾಯಿತು.
ಸಭೆಯಲ್ಲಿ ಸರ್ಕಲ್ ಉಪಾಧ್ಯಕ್ಷರಾದ ಉಸ್ಮಾನ್ ಹಾಜಿ ಆಲಂದಿಲ, ಅಬೂಬಕ್ಕರ್ ಹಾಜಿ ಪರಪ್ಪು,ಅಬ್ದುಲ್ ಕರೀಮ್ ಗೇರುಕಟ್ಟೆ ,ಮಹಮ್ಮದ್ ರಫೀಕ್ ಮುಸ್ಲಿಯಾರ್ ಜಾರಿಗೆಬೈಲು,ಎಮ್.ಎಚ್. ಅಬೂಬಕ್ಕರ್,ಅಬ್ದುಲ್ ರಹಿಮಾನ್ ಲಾಡಿ, ಅಬ್ದುಲ್ ಖಾದರ್ ಹಾಜಿ ಪರಪ್ಪು,ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ವಿವಿಧ ಯೂನಿಟ್ ಗಳ ಉಸ್ಮಾನ್ ಹಾಜಿ ಪರಪ್ಪು, ಎಸ್.ಸುಲೈಮಾನ್ ಜಾರಿಗೆಬೈಲು,ಮಹಮ್ಮದ್ ಆಲಂದಿಲ,ಮೂಸ ಕೆಲ್ಲಾರು ಹಾಜರಿದ್ದರು.
ವಿವಿಧ ಯೂನಿಟ್ ಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಯಿತು.
ಕಾಂತಿಜಾಲು – ಅಬ್ಬೋನು ಮದ್ದಡ್ಕ ಹಾಗೂ ಅಬ್ದುಲ್ ಕರೀಮ್,ಮದ್ದಡ್ಕ – ಮಹಮ್ಮದ್ ರಫೀಕ್ ಮುಸ್ಲಿಯಾರ್, ಲಾಡಿ – ಉಸ್ಮಾನ್ ಹಾಜಿ ಆಲಂದಿಲ,ಅಳದಂಗಡಿ – ಮಹಮ್ಮದ್ ಆಲಂದಿಲ, ಪರಪ್ಪು – ಎನ್.ಎಸ್ ಉಸ್ಮಾನ್ ಸಖಾಫಿ,ಜಾರಿಗೆ ಬೈಲು – ಅಬೂಬಕರ್ ಹಾಜಿ ಪರಪ್ಪು, ಆಲಂದಿಲ – ಎಮ್.ಎಚ್. ಅಬೂಬಕ್ಕರ್, ಬದ್ಯಾರ್ – ಇಸ್ಮಾಯಿಲ್ ಹಾಜಿ ಜಾರಿಗೆಬೈಲು, ಗುರುವಾಯನಕೆರೆ – ಅಬ್ದುಲ್ ರಹಿಮಾನ್ ಲಾಡಿ ಆಯ್ಕೆ ಮಾಡಲಾಯಿತು.

Related posts

ಪಣಕಜೆ:ಪ್ಲೈವುಡ್ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿ

Suddi Udaya

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘ ಪ್ರತಿ ವರ್ಷದಂತೆ ದೀಪಾವಳಿಯ ನರಕ ಚತುರ್ದಶಿಯಂದು ಆಯೋಜಿಸಿರುವ ವಾರ್ಷಿಕ ಕ್ರೀಡಾಕೂಟ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ಜೆ ಸಿ ಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya
error: Content is protected !!