22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು.

ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು. ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇರುವುದರಿಂದ. ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸರು ಸಹಕರಿಸಿದರು.

Related posts

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಎಸ್. ಎಸ್.ಎಲ್. ಸಿ ಮರು ಮೌಲ್ಯಮಾಪನದಲ್ಲಿ 624 ಅಂಕ ಪಡೆದು ಶಾರಾನ್ ಡಿಸೋಜಾ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್.

Suddi Udaya

ನದಿಗೆ ಬಲೆ ಹಾಕಿ ಮೀನು ಹಿಡಿಯಲು ಹೋದ ವ್ಯಕ್ತಿ ಅಸಹಜವಾಗಿ ಸಾವು

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಓರಿಯೆಂಟೇಷನ್ ಕಾರ್ಯಕ್ರಮ.

Suddi Udaya

ರಾಷ್ಟ್ರಮಟ್ಟದ ಚಿತ್ರಕಲಾ ಸ್ಪರ್ಧೆ: ಕೊಕ್ಕಡ ವಿನು ಸ್ಕೂಲ್ ಆಫ್ ಆರ್ಟ್ಸ್ ನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಪೊಲೀಸ್ ವಾಹನಕ್ಕೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪ್ರಕರಣ; ಮೂವರು ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya
error: Content is protected !!