September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬದಿ ಇರುವ ಅನಧಿಕೃತ ಗೂಡಂಗಡಿಗಳನ್ನು ಧರ್ಮಸ್ಥಳ ಗ್ರಾ. ಪಂ. ನಿಂದ ತೆರವು

ಧರ್ಮಸ್ಥಳದಿಂದ ಬೆಂಗಳೂರಿಗೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಲ್ಲೇರಿಯಿಂದ ಕುದ್ರಾಯ ಸೇತುವೆ ತನಕ ರಸ್ತೆ ಬದಿ ಹಾಗೂ ಅರಣ್ಯ ಪ್ರದೇಶದಲ್ಲಿ ಅನಧಿಕೃತವಾಗಿ ಹಾಕಿರುವ 19 ಅಂಗಡಿಗಳನ್ನು ಧರ್ಮಸ್ಥಳ ಗ್ರಾಮ ಪಂಚಾಯಿತಿಯಿಂದ ತೆರೆವುಗೊಳಿಸಲಾಯಿತು.

ಅಂಗಡಿಗಳನ್ನು ತೆರವುಗೊಳಿಸುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿದ್ದು. ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿತ್ತು. ಸದ್ರಿ ಅಂಗಡಿಗಳಿಂದಾಗಿ ಈ ಮೊದಲು ವಾಹನಗಳು ಅಪಘಾತವಾಗಿ ಸಾವು ಸಂಭವಿಸಿದ್ದವು. ಈ ಬಗ್ಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿ ಜಾಗೃತರಾಗಿ ಸಂಬಂಧಪಟ್ಟ ಅಂಗಡಿ ಮಳಿಗೆಗೆ ಧ್ವನಿವರ್ಧಕಗಳ ಮೂಲಕ ಸತತವಾಗಿ ತೆರವುಗೊಳಿಸುವಂತೆ ಸೂಚನೆಯನ್ನು ನೀಡಲಾಗಿತ್ತು. ಆದರು ಕೂಡ ತೆರವುಗೊಳಿಸದೆ ಇರುವುದರಿಂದ. ಧರ್ಮಸ್ಥಳ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ಸಹಕಾರದೊಂದಿಗೆ, ಧರ್ಮಸ್ಥಳ ಗ್ರಾಮ್ ಪಂಚಾಯತ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದಿನೇಶ್ ಎಂ ಹಾಗೂ ಸಿಬ್ಬಂದಿ ವರ್ಗದವರು ತೆರವುಗೊಳಿಸಿದರು.

ಈ ಸಂದರ್ಭದಲ್ಲಿ ಧರ್ಮಸ್ಥಳ ಪೊಲೀಸರು ಸಹಕರಿಸಿದರು.

Related posts

ಪೆರ್ಲ ಬೈಪಾಡಿ ಸ. ಹಿ. ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಎಲ್.ಸಿ.ಆರ್ ವಿದ್ಯಾ ಸಂಸ್ಥೆಗೆ ಪ್ರಶಸ್ತಿ

Suddi Udaya

ಕನ್ಯಾಡಿ ಶ್ರೀ ರಾಮ ಕ್ಷೇತ್ರದಲ್ಲಿ 64ನೇ ವರ್ಷದ ಶ್ರೀರಾಮ ನಾಮ ಸಪ್ತಾಹದ ಉದ್ಘಾಟನೆ:

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ : ಪೂರ್ವ ಪ್ರಾಥಮಿಕ ಹಾಗೂ ಕಿರಿಯ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ: ವಿದ್ಯಾರ್ಥಿಯ ದತ್ತು ಸ್ವೀಕಾರ, ದೀಪಕ್ ಹೆಚ್.ಡಿ ಯವರಿಗೆ ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಭಜನಾ ಮಂಡಳಿಯ 46ನೇ ವರ್ಷದ ಭಜನಾ ಸಪ್ತಾಹ

Suddi Udaya
error: Content is protected !!