23.3 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬೆಳ್ತಂಗಡಿ: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಮೇ.14ರಂದು ದಸ್ತಗಿರಿ ಮಾಡಿದ್ದಾರೆ.

ಅಜರುದ್ದೀನ್ @ ಅಜರ್ @ ಅಜ್ಜು (29), ತಂದೆ: ಅಬೂಬಕ್ಕರ್, ವಾಸ: ಕಳವಾರು ಆಶ್ರಯ ಕಾಲೊನಿ, ಕಳವಾರು ಗ್ರಾಮ, ಮಂಗಳೂರು, ಅಬ್ದುಲ್ ಖಾದರ್ @ ನೌಫಲ್(24), ತಂದೆ: ಕೆ ಎಂ ನಜೀರ್, ವಾಸ: ಬದ್ರಿಯ ನಗರ, ಬೆಳಪು, ಕಾಪು, ಉಡುಪಿ ಜಿಲ್ಲೆ, ಹಾಲಿ ವಾಸ: ಜೈನಾಬಿ ಫ್ಲಾಟ್, ಭಟ್ರಕೆರೆ, ಉಸ್ಮಾನಿಯಾ ಮಸೀದಿ ಬಳಿ, ಬಟ್ಟೆ, ಮಂಗಳೂರು ಮತ್ತು ನೌಷಾದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ (39), ತಂದೆ: ದಿ.ನಸ್ರುದ್ದೀನ್, ವಿಳಾಸ: ಟಿ.ಕೆ.ಬಶೀರ್ ಅಪಾರ್ಟಮೆಂಟ್ 1ನೇ ಮಹಡಿ, ಸಿಟಿ ಲೈಟ್ ಹೊಟೇಲ್ ಹಿಂಭಾಗ, ಕುಂಪನಮಜಲು ರಸ್ತೆ, ಫರಂಗಿಪೇಟೆ, ಬಂಟ್ವಾಳ ತಾಲೂಕು, ಹಾಲಿ ವಾಸ: ಸೈಯದ್ ರವರ ಬಾಡಿಗೆ ಮನೆ, 1ನೇ ಮಹಡಿ, ಕೆ.ಆ‌ರ್.ಪುರಂ, ಹಾಸನ ಜಿಲ್ಲೆ ಇವರು ಬಂಧಿತರು. ಆರೋಪಿಗಳ ಪೈಕಿ ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿರುತ್ತದೆ. ಈತನು ಪ್ರಕರಣದ ಆರೋಪಿಗಳಿಗೆ ಕೊಲೆಯಾದ ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿರುತ್ತಾನೆ. ಆರೋಪಿ ಅಬ್ದುಲ್ ಖಾದರ್ @ ನೌಫಲ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ಸಮಯದಲ್ಲಿ ಆರೋಪಿಗಳಿಗೆ ಸಹಕರಿಸಿದ್ದನು. ಇನ್ನೋರ್ವ ಆರೋಪಿ ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್ ಎಂಬಾತನು ಸುಹಾಸ್ ಶೆಟ್ಟಿಯ ಕೊಲೆಗೆ ಉಳಿದ ಆರೋಪಿಗಳ ಜೊತೆ ಸಂಚು ರೂಪಿಸಿ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದಾಗಿದೆ.

ಈತನು ಈ ಹಿಂದೆ ಸುರತ್ಕಲ್, ಬಟ್ಟೆ, ಮೂಡಬಿದ್ರಿ, ಮಂಗಳೂರು ಉತ್ತರ, ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಕೊಲೆ, ಕೊಲೆ ಯತ್ನ, ದರೋಡೆಗೆ ಸಂಚು ಸೇರಿದಂತೆ ಒಟ್ಟು 6 ಪ್ರಕರಣಗಳು ದಾಖಲಾಗಿರುತ್ತದೆ

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು ಅಜರುದ್ದೀನ್ @ ಅಜರ್ @ ಅಜ್ಜು ಎಂಬಾತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿರುತ್ತದೆ. ಆರೋಪಿಗಳಾದ ಅಬ್ದುಲ್ ಖಾದರ್ @ ನೌಫಲ್ ಮತ್ತು ನೌಷದ್ @ ವಾಮಂಜೂರು ನೌಷದ್ @ ಚೊಟ್ಟೆ ನೌಷದ್‌ ಎಂಬವರನ್ನು ಹೆಚ್ಚಿನ ತನಿಖೆ ಕುರಿತು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿರುತ್ತದೆ. ಈ ಕೊಲೆ ಪ್ರಕರಣದ ತನಿಖೆಯು ಮುಂದುವರಿದಿದ್ದು, ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ನಗರ ಪೊಲೀಸ್ ಆಯುಕ್ತರ ಪ್ರಕಟಣೆ ತಿಳಿಸಿದೆ

Related posts

ಮಾ.31ರೊಳಗೆ ಶಾಲಾ ಹಳೇ ವಿದ್ಯಾರ್ಥಿಗಳ ಸಂಘ ರಚಿಸುವಂತೆ ಶಿಕ್ಷಣ ಇಲಾಖೆ ಸೂಚನೆ

Suddi Udaya

ಬಂದಾರು: ತೀರ ಹದಗೆಟ್ಟ ರಸ್ತೆ; ದುರಸ್ತಿಗೊಳಿಸುವಂತೆ ಸ್ಥಳೀಯರ ಮನವಿ

Suddi Udaya

ಮಡಂತ್ಯಾರು: ರಬ್ಬರ್ ಮರ ಸಾಗಾಟ ಮಾಡುತ್ತಿದ್ದ ಲಾರಿ ಪಲ್ಟಿ‌

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯುವ ಸಾಹಸ ಸೂಕ್ತ ಕಾನೂನು ಕ್ರಮಕ್ಕೆ ಈಶ್ವರ್ ಖಂಡ್ರೆ ಸೂಚನೆ

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಹಾಗೂ ಅರಣ್ಯ ಇಲಾಖೆ ಇವರ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!