March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆ ಉದ್ಘಾಟನೆ

ಚಾರ್ಮಾಡಿ: ಪ್ರತಿಷ್ಠಿತ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಕಕ್ಕಿಂಜೆ ಶಾಖೆಯ ಉದ್ಘಾಟನೆಯು ಮೇ 16 ರಂದು ಚಾರ್ಮಾಡಿ ಗ್ರಾಮ ಪಂಚಾಯತ್ ಕಟ್ಟಡದಲ್ಲಿ ನಡೆಯಿತು.

ಶಾಖಾ ಕಛೇರಿ ಉದ್ಘಾಟನೆಯನ್ನು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಎಸ್. ಜಯರಾಮ ಶೆಟ್ಟಿ ನೆರವೇರಿಸಿದರು. ಅಧ್ಯಕ್ಷತೆಯನ್ನು ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯಾರು ವಹಿಸಿದರು.

ದೀಪ ಪ್ರಜ್ವಲನೆಯನ್ನು ಪ್ರಗತಿಪರ ಕೃಷಿಕ ಕೆ. ಅನಂತರಾಮ್ ರಾವ್ ನೆರವೇರಿಸಿ, ಶುಭಹಾರೈಸಿದರು. ಭದ್ರತಾ ಕೊಠಡಿಯನ್ನು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಸಂಸ್ಕರಣ ಮತ್ತು ಮಾರಾಟ ಸಹಕಾರ ಸಂಘದ ಅಧ್ಯಕ್ಷ ಶ್ರೀಧರ ಜಿ. ಭಿಡೆ ಉದ್ಘಾಟಿಸಿದರು.

ಮುಖ್ಯ ಅಥಿತಿಗಳಾಗಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಬಿ. ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಚಾರ್ಮಾಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಶಾರದ ಎ., ತೋಟತ್ತಾಡಿ ಸೈಂಟ್ ಅಂಥೋನಿ ಪೊರೇನ್ ಚರ್ಚ್ ನ ಟ್ರಸ್ಟಿ ಶಾಜಿ ತೊಪ್ಪಿಲ್, ಕಕ್ಕಿಂಜೆ ಮೊಹಿದ್ದಿನ್ ಜುಮಾ ಮಸೀದಿಯ ಅಧ್ಯಕ್ಷ ಇಸ್ಮಾಯಿಲ್ ಜಿ., ಚಾರ್ಮಾಡಿ ಶ್ರೀ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಪ್ರಕಾಶ ಹೊಸಮಠ, ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ. ವಿನಯಚಂದ್ರ, ಚಾರ್ಮಾಡಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಜಿ. ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕೆ., ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ನಿರ್ದೇಶಕರುಗಳಾದ ಎಸ್. ಜಯರಾಮ್ ಶೆಟ್ಟಿ, ಎಂ. ಗೋಪಾಲಕೃಷ್ಣ ಶೆಟ್ಟಿ, ಸೀತಾರಾಮ ಶೆಟ್ಟಿ ಬಿ., ಬಾಲಕೃಷ್ಣ ಪೂಂಜ ಹೆಚ್, ಪುಷ್ಪರಾಜ್ ಶೆಟ್ಟಿ, ರಘುರಾಮ ಶೆಟ್ಟಿ ಎ., ಕೃಷ್ಣ ರೈ ಟಿ, ಎಂ. ಜಯರಾಮ ಭಂಡಾರಿ, ಪುರಂದರ ಶೆಟ್ಟಿ, ಮಂಜುನಾಥ್ ರೈ, ರಾಜು ಶೆಟ್ಟಿ, ಬೆಂಗತ್ಯಾರು, ಜಯರಾಮ ಶೆಟ್ಟಿ ಮುಂಡಾಡಿಗುತ್ತು, ರಾಜೇಶ್ ಶೆಟ್ಟಿ ನವಶಕ್ತಿ, ಪ್ರಕಾಶ್ ಶೆಟ್ಟಿ ನೊಚ್ಚ, ಶ್ರೀಮತಿ ಸಾರಿಕ ಶೆಟ್ಟಿ, ಶ್ರೀಮತಿ ವಿಜಯ ಬಿ ಶೆಟ್ಟಿ, ಶಾಖಾ ಪ್ರಬಂಧಕ ಅಜಿತ್ ಕುಮಾರ್ ಮತ್ತು ಸಿಬ್ಬಂದಿ ವರ್ಗ, ಸದಸ್ಯರು ಉಪಸ್ಥಿತರಿದ್ದರು.

ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು.

Related posts

ಪಿಕಫ್ ಚಾಲಕ ಸತೀಶ್ ಕುಲಾಲ್ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಿರಿಯ ಕಾಂಗ್ರೆಸ್ ಮುಖಂಡ ಲಿಂಗಪ್ಪ ಗೌಡ ನಿಧನ

Suddi Udaya

ಉಜಿರೆ ಎಸ್ ಡಿ.ಎಂ.ಕಾಲೇಜು ಎನ್.ಎಸ್.ಎಸ್. ಘಟಕಕ್ಕೆ ರಾಜ್ಯ ಪ್ರಶಸ್ತಿ

Suddi Udaya

ಮೊಬೈಲ್ ಹಿಂದಿರುಗಿಸಿಕೊಟ್ಟು ಮಾನವೀಯತೆ ಮೆರೆದ ಬೆಳ್ತಂಗಡಿ ಸಂತೆಕಟ್ಟೆ ಗಣೇಶ್ ಮೆಡಿಕಲ್ ಮಾಲೀಕ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಉಜಿರೆ: ಶ್ರೀ ಧ.ಮಂ.ಇಂಜಿನಿಯರಿಂಗ್ ಕಾಲೇಜಿನ ಇಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಶನ್ಸ್ ವಿಭಾಗದ ಉಪನ್ಯಾಸಕ ಪ್ರತಾಪಚಂದ್ರ ರವರಿಗೆ ಪಿ.ಎಚ್.ಡಿ ಪದವಿ

Suddi Udaya
error: Content is protected !!