25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ನಿದ್ದೆ ಮಾತ್ರೆ ಸೇವಿಸಿ ಗಂಭೀರ ಸ್ಥಿತಿಯಲ್ಲಿದ್ದ ಕಲಾವಿದ ಮುಂಡಾಜೆಯ ಜಯರಾಂ ಕೆ. ಮೃತ್ಯು

ಬೆಳ್ತಂಗಡಿ: ನಿದ್ದೆ ಮಾತ್ರೆ ಸೇವಿಸಿ ತೀವ್ರ ಅಸ್ವಸ್ಥರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಾವಿದ ಜಯರಾಂ ಕೆ. ಇಂದು ಸಂಜೆ ಮೃತಪಟ್ಟಿದ್ದಾರೆ. ಇವರು ತಾಯಿ ಮುಂಡಾಜೆ ಗ್ರಾಮದ ಕೂಳೂರು ನಿವಾಸಿ ದಿ. ಕುಂಞಿರಾಮನ್ ನಾಯರ್ ಅವರ ಪತ್ನಿ ಕಲ್ಯಾಣಿ(96‌ ವ) ಅವರು ಮೇ.12ರಂದು ಸಾವನ್ನಪ್ಪಿದ್ದರು.

ಅವರ ಪುತ್ರ ಚಿತ್ರಕಲಾ ಶಿಕ್ಷಕ, ರಾಜ್ಯ ಮಟ್ಟದ ಕಲಾವಿದ ಜಯರಾಂ ಕೆ. ಅವರು ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ವೆನ್ಲಾಕ್ ಜಿಲ್ಲಾ ಸರಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದತ್ತಿದ್ದು, ಇಂದು ಸಂಜೆ ಮೃತಪಟ್ಟಿದ್ದಾರೆ.

ಆರ್ಥಿಕ ಸಮಸ್ಯೆ ಮತ್ತು ಅನಾರೋಗ್ಯದ ಕಾರಣದಿಂದ ಜೀವನದಲ್ಲಿ ಜಿಗುಪ್ಸೆ ಹೊಂದಿ ತಾಯಿ ಮಗ ಇಬ್ಬರೂ ಕಳೆದ ಮೇ.9 ರಂದು ರಾತ್ರಿ ಕೂಳೂರು ಮನೆಯಲ್ಲಿ ಅತಿಯಾಗಿ ನಿದ್ದೆ ಮಾತ್ರೆ ಸೇವಿಸಿದ್ದರು.ಮೇ. 10 ರಂದು ಬೆಳಗ್ಗೆ ಜಯರಾಂ ಅವರ ಮನೆಯ ಬಳಿಯಿಂದ ಯಾವುದೇ ಶಬ್ದ ಕೇಳದೆ ಇದ್ದುದರಿಂದ ನೆರೆ ಹೊರೆ ಯವರು ಬಂದು ನೋಡಿದಾಗ ತಾಯಿ ಮತ್ತು ಮಗ ಮನೆಯೊಳಗೆ ದೇವರ ಕೋಣೆಯ ಎದುರು ಜೊತೆಯಾಗಿ ಮಲಗಿದ ಸ್ಥಿತಿಯಲ್ಲಿ ಕಂಡುಬಂದಿದ್ದರು. ಊರವರು ಹಾಗೂ ಅಣ್ಣನ ಮಕ್ಕಳ ಸಹಕಾರದೊಂದಿಗೆ ಮನೆಯ ಬಾಗಿಲು ತೆಗೆದು‌ ಒಳ ಪ್ರವೇಶಿಸಿದಾಗ ಇಬ್ಬರೂ ಉಸಿರಾಡುತ್ತಿದ್ದರು. ತಕ್ಷಣ ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ಕಲ್ಯಾಣಿ ಅವರಿಗೆ ನಾಲ್ವರು ಗಂಡು ಮಕ್ಕಳಿದ್ದು ಈ ಪೈಕಿ ಶ್ರೀಧರ ನಾಯರ್ ಮತ್ತು ರಾಜನ್ ನಾಯರ್ ಅವರು ಈಗಾಗಲೇ ಮೃತಪಟ್ಟಿದ್ದಾರೆ.

ಮೃತ ಜಯರಾಂ ಅವರು ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಮಾಜಿ ಅಧ್ಯಕ್ಷ, ರಾಜ್ಯಮಟ್ಟದ ಕಲಾವಿದ, ಕಲಾರಾಧಕ, ಹವ್ಯಾಸಿ‌ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೆ.ಅವರ ಮೃತದೇಹ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿದ್ದು ಶನಿವಾರ (ನಾಳೆ)ಮರಣೋತ್ತರ ಪರೀಕ್ಷೆ ಜರುಗಲಿದೆ. ಬಳಿಕ ಮೃತದೇಹವನ್ನು ಸೋಮಂತಡ್ಕ ಪೇಟೆಯಲ್ಲಿರುವ ಅವರ ಮೆಚ್ಚಿನ ಸಂಸ್ಥೆ ಕಲಾಕುಂಚದ ಎದುರಿನಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ಬಳಿಕ ಪಾರ್ಥಿವ ಶರೀರವನ್ನು ಅವರ ಕೂಳೂರು ನಿವಾಸಕ್ಕೆ ತಂದು ಅಂತಿಮ‌ ವಿಧಿ ವಿಧಾನಗಳನ್ನು ಪೂರೈಸಿ ಮುಂಡಾಜೆ ಹಿಂದೂ‌ರುದ್ರ ಭೂಮಿಯಲ್ಲಿ ಅಂತಿಮ‌ಸಂಸ್ಕಾರ ನಡೆಸಲಾಗುವುದು ಎಂದು ಅವರ ಕುಟುಂಬದವರು ತಿಳಿಸಿರುತ್ತಾರೆ.

Related posts

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಹತ್ಯಡ್ಕ: ನಿವೃತ್ತಿಗೊಂಡ ಕೆ.ವಿ.ಜಿ ಬ್ಯಾಂಕ್ ಮ್ಯಾನೇಜರ್ ಪುಷ್ಪರಾಜ್ ಕೆ.ಸಿ ರವರಿಗೆ ಬಿಳ್ಕೋಡುಗೆ ಸಮಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಲ್ಲಿ ಭಜನಾ ವಾರ್ಷಿಕೋತ್ಸವ ಮತ್ತು ಮಹಾಶಿವರಾತ್ರಿ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಬಂದಾರು: ಕುಂಟಾಲಪಲ್ಕೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ಹಾನಿ

Suddi Udaya
error: Content is protected !!