July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

ಮುಂಡೂರು : ಮುಂಡೂರು ಗ್ರಾಮದ ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಮೇ 16ರಂದು ಬೆಳಗ್ಗೆ ವೆಂಕಟೇಶ ಶಾಂತಿ ಶಂಭೂರು ಅವರ ನೇತೃತ್ವದಲ್ಲಿ ನಾಲ್ಕುಗುತ್ತು, ಬರ್ಕೆ ಗ್ರಾಮಗಳಿಗೆ ಸಂಬಂಧಪಟ್ಟ ಜೂಮ್ರ ಜುಮಾದಿ ದೈವಗಳ ಪುನರ್ ಪ್ರತಿಷ್ಠಾಪನೆ ನಡೆಯಿತು.


ಮೇ 15ರಂದು ಬೆಳಗ್ಗೆ ಪಾಪಿನಡೆಗುತ್ತಿನ ಕುಟುಂಬಸ್ಥರ ಧರ್ಮ ಚಾವಡಿಯಲ್ಲಿ ಗಣಹೋಮ, ಮೂಲ ನಾಗಬನದಲ್ಲಿ ನಾಗಬ್ರಹ್ಮ ದೇವರಿಗೆ ತನುತಂಬಿಲ ಸೇವೆ, ಧರ್ಮಚಾವಡಿಯಲ್ಲಿ ದೈವಗಳಿಗೆ ಪಂಚಪರ್ವ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಜೂಮ್ರ ಜುಮಾದಿ ದೈವಸ್ಥಾನದ ಎದುರಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ, ಸಪ್ತಶುದ್ದಿ ಶಿಲ್ಪವರ್ಣ, ಪಂಚಗವ್ಯ ಮೇಲನ ಸ್ವಸ್ತಿ ಪುಣ್ಯಾಹವಾಚನ, ರಾಕ್ಟೋಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ವಾಸ್ತು ಬಲಿ, ಪ್ರಕಾರ ಬಲಿ, ಪ್ರಕಾರ ಶುದ್ದಿ, ಬಿಂಬ ಶುದ್ದಿ, ಧಾನ್ಯಾಧಿವಾಸ, ಶಯನಾಧಿವಾಸ, ಅನ್ನಸಂತರ್ಪಣೆ ನಡೆಯಿತು.
ಮೇ 16ರಂದು ಬೆಳಗ್ಗೆ ಗಣಪತಿಹೋಮ, ತೋರಣ ಮುಹೂರ್ತ, ಶಿಖರ ಪ್ರತಿಷ್ಠೆ ನವಕ ಕಲಶ ಪೂಜೆ, ನವಕ ಪ್ರಧಾನ ಹೋಮ, ಬೆಳಗ್ಗೆ ದೈವ ಪ್ರತಿಷ್ಠೆ ಪ್ರತಿಷ್ಠಾ ಹೋಮ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ನಡೆಯಿತು.

ಕಾಯ೯ಕ್ರಮಗಳಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಮುಂಡೂರು ಶ್ರೀಕ್ಷೇತ್ರ ಮಂಗಳಗಿರಿಯ ಧರ್ಮದರ್ಶಿ ರಾಜೀವ, ಪ್ರತಿಷ್ಠಾನದ ಪದಾಧಿಕಾರಿಗಳು, ಕುಟುಂಬಸ್ಥರು, ನಾಲ್ಕು ಗ್ರಾಮಗಳ ಭಕ್ತರು ಭಾಗವಹಿಸಿದ್ದರು.


ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, ರಾತ್ರಿ 8.30ಕ್ಕೆ ಜೂಮ್ರ, ಜುಮಾದಿ ದೈವಗಳ ನೇಮೋತ್ಸವ ನಡೆಯಲಿದೆ .


Related posts

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ನಾಲ್ಕೂರು:ಪಿಯುಸಿಯಲ್ಲಿ ಉನ್ನತ ಶ್ರೇಣಿಯೊಂದಿಗೆ ಉತ್ತೀರ್ಣರಾದ ಪ್ರಾಣೇಶ್ ಶೆಟ್ಟಿಯವರಿಗೆ ಸನ್ಮಾನ

Suddi Udaya

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಆಲ್ ಇಂಡಿಯಾ ಕರಾಟೆ ಚಾಂಪಿಯನ್ ಶಿಪ್ 2025: ಸಾನ್ವಿ ಎಸ್ ಕೋಟ್ಯಾನ್ ಬಳಂಜರವರಿಗೆ ಪ್ರಶಸ್ತಿ

Suddi Udaya

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!