22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

ಬೆಳ್ತಂಗಡಿ: ಬಂದಾರು ಗ್ರಾಮದ ಮದುವೆ ಮನೆಯೊಂದರ ಆರತಕ್ಷತೆ ಊಟ ಸೇವಿಸಿ ವಾಂತಿ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಆರತಕ್ಷತೆ ಊಟ ಮಾಡಿದ ಬಹುತೇಕ ಮಂದಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ 5 ಮಂದಿಯ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ಸಮಾರಂಭಕ್ಕೆ ಆಗಮಿಸಿದ ವ್ಯಕ್ತಿಗಳು ವಾಂತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಬಂದಾರಿನ ಸುಮಾರು 40 ಹೆಚ್ಚು ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅರತಕ್ಷತೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ಸೇವಿಸಿದ ಮಂದಿ ಅಸ್ವಸ್ಥರಾಗುತ್ತಿದ್ದು ಘಟನೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ. ವಧು ವರರನ್ನು ಆಶೀರ್ವಾದಿಸಲು ಬಂದವರಿಗೆ ಈ ರೀತಿ ನಡೆಯಿತಲ್ಲ ಎಂದು ಮದುವೆ ಮನೆಯವರು ದುಃಖ ಪಡುತ್ತಿದ್ದಾರೆ ಎನ್ನಲಾಗಿದೆ.

Related posts

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಬೀದರ್‌ನಲ್ಲಿ ಕ್ಷೀರಕ್ರಾಂತಿ : ದೇಶಕ್ಕೆ ಮಾದರಿಯಾದ ಡಾ. ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿ ಬಳಕೆ

Suddi Udaya

ಕೊಕ್ಕಡ ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಖೋ ಖೋ ಕ್ರೀಡಾ ಕೂಟದ ಸಮಾರೋಪ ಸಮಾರಂಭ

Suddi Udaya

ಮುಂಡಾಜೆಯಲ್ಲಿ ನಗರ ಸ್ವಚ್ಛತೆ

Suddi Udaya

ಕೂಕ್ರಬೆಟ್ಟು ಶಾಲೆಯಲ್ಲಿ ನಾರಾವಿ ವಲಯ ಮಟ್ಟದ ವಾಲಿಬಾಲ್‌ ಪಂದ್ಯಾಟ: ಸಾವ್ಯ, ಅಂಡಿಂಜೆ ಶಾಲಾ ಮಕ್ಕಳು ಪ್ರಥಮ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಾಧಕರ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!