September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

ಬೆಳ್ತಂಗಡಿ: ಬಂದಾರು ಗ್ರಾಮದ ಮದುವೆ ಮನೆಯೊಂದರ ಆರತಕ್ಷತೆ ಊಟ ಸೇವಿಸಿ ವಾಂತಿ ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿ ಓರ್ವ ಮಹಿಳೆ ಸಾವನ್ನಪ್ಪಿದ ಬಗ್ಗೆ ವರದಿಯಾಗಿದೆ.

ಬಂದಾರು ಗ್ರಾಮದಲ್ಲಿ ಮೇ 12 ರಂದು ನಡೆದ ಆರತಕ್ಷತೆ ಊಟ ಮಾಡಿದ ಬಹುತೇಕ ಮಂದಿಗೆ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು 60 ವರ್ಷ ಮೇಲ್ಪಟ್ಟ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ 5 ಮಂದಿಯ ಪೈಕಿ ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮದುವೆ ಸಮಾರಂಭಕ್ಕೆ ಆಗಮಿಸಿದ ವ್ಯಕ್ತಿಗಳು ವಾಂತಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎನ್ನಲಾಗಿದೆ.

ಆರೋಗ್ಯ ಇಲಾಖೆ ಅಧಿಕಾರಿಗಳು ಬಂದಾರಿನ ಸುಮಾರು 40 ಹೆಚ್ಚು ಮನೆಗಳಿಗೆ ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಅರತಕ್ಷತೆಯ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ಸೇವಿಸಿದ ಮಂದಿ ಅಸ್ವಸ್ಥರಾಗುತ್ತಿದ್ದು ಘಟನೆಗೆ ನಿಖರ ಕಾರಣ ತಿಳಿದು ಬರಬೇಕಾಗಿದೆ. ವಧು ವರರನ್ನು ಆಶೀರ್ವಾದಿಸಲು ಬಂದವರಿಗೆ ಈ ರೀತಿ ನಡೆಯಿತಲ್ಲ ಎಂದು ಮದುವೆ ಮನೆಯವರು ದುಃಖ ಪಡುತ್ತಿದ್ದಾರೆ ಎನ್ನಲಾಗಿದೆ.

Related posts

ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಜಾಗೃತಿ ಕಾರ್ಯಕ್ರಮ

Suddi Udaya

ಕುವೆಟ್ಟು: ಸ.ಉ. ಪ್ರಾ. ಶಾಲಾ ನೂತನ ಎಸ್ ಡಿ ಎಂ ಸಿ ಸಮಿತಿ ರಚನೆ

Suddi Udaya

ಆ.20: ಉಜಿರೆಯಲ್ಲಿ ಸದಸ್ಯತ್ವ ನೋಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ : ಸಮಾಲೋಚನಾ ಸಭೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಚರ್ಮರೋಗ ತಪಾಸಣಾ ಶಿಬಿರ : 200 ಕ್ಕೂ ಅಧಿಕ ಮಂದಿ ಶಿಬಿರದಲ್ಲಿ ಭಾಗಿ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya
error: Content is protected !!