24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

ಮುಂಡೂರು : ಮುಂಡೂರು ಗ್ರಾಮದ ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಮೇ 16ರಂದು ಬೆಳಗ್ಗೆ ವೆಂಕಟೇಶ ಶಾಂತಿ ಶಂಭೂರು ಅವರ ನೇತೃತ್ವದಲ್ಲಿ ನಾಲ್ಕುಗುತ್ತು, ಬರ್ಕೆ ಗ್ರಾಮಗಳಿಗೆ ಸಂಬಂಧಪಟ್ಟ ಜೂಮ್ರ ಜುಮಾದಿ ದೈವಗಳ ಪುನರ್ ಪ್ರತಿಷ್ಠಾಪನೆ ನಡೆಯಿತು.


ಮೇ 15ರಂದು ಬೆಳಗ್ಗೆ ಪಾಪಿನಡೆಗುತ್ತಿನ ಕುಟುಂಬಸ್ಥರ ಧರ್ಮ ಚಾವಡಿಯಲ್ಲಿ ಗಣಹೋಮ, ಮೂಲ ನಾಗಬನದಲ್ಲಿ ನಾಗಬ್ರಹ್ಮ ದೇವರಿಗೆ ತನುತಂಬಿಲ ಸೇವೆ, ಧರ್ಮಚಾವಡಿಯಲ್ಲಿ ದೈವಗಳಿಗೆ ಪಂಚಪರ್ವ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಜೂಮ್ರ ಜುಮಾದಿ ದೈವಸ್ಥಾನದ ಎದುರಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ, ಸಪ್ತಶುದ್ದಿ ಶಿಲ್ಪವರ್ಣ, ಪಂಚಗವ್ಯ ಮೇಲನ ಸ್ವಸ್ತಿ ಪುಣ್ಯಾಹವಾಚನ, ರಾಕ್ಟೋಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ವಾಸ್ತು ಬಲಿ, ಪ್ರಕಾರ ಬಲಿ, ಪ್ರಕಾರ ಶುದ್ದಿ, ಬಿಂಬ ಶುದ್ದಿ, ಧಾನ್ಯಾಧಿವಾಸ, ಶಯನಾಧಿವಾಸ, ಅನ್ನಸಂತರ್ಪಣೆ ನಡೆಯಿತು.
ಮೇ 16ರಂದು ಬೆಳಗ್ಗೆ ಗಣಪತಿಹೋಮ, ತೋರಣ ಮುಹೂರ್ತ, ಶಿಖರ ಪ್ರತಿಷ್ಠೆ ನವಕ ಕಲಶ ಪೂಜೆ, ನವಕ ಪ್ರಧಾನ ಹೋಮ, ಬೆಳಗ್ಗೆ ದೈವ ಪ್ರತಿಷ್ಠೆ ಪ್ರತಿಷ್ಠಾ ಹೋಮ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ನಡೆಯಿತು.

ಕಾಯ೯ಕ್ರಮಗಳಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಮುಂಡೂರು ಶ್ರೀಕ್ಷೇತ್ರ ಮಂಗಳಗಿರಿಯ ಧರ್ಮದರ್ಶಿ ರಾಜೀವ, ಪ್ರತಿಷ್ಠಾನದ ಪದಾಧಿಕಾರಿಗಳು, ಕುಟುಂಬಸ್ಥರು, ನಾಲ್ಕು ಗ್ರಾಮಗಳ ಭಕ್ತರು ಭಾಗವಹಿಸಿದ್ದರು.


ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, ರಾತ್ರಿ 8.30ಕ್ಕೆ ಜೂಮ್ರ, ಜುಮಾದಿ ದೈವಗಳ ನೇಮೋತ್ಸವ ನಡೆಯಲಿದೆ .


Related posts

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ಅಳದಂಗಡಿಯಲ್ಲಿ ಕಾಳುಮೆಣಸು ಮತ್ತು ಜಾಯಿಕಾಯಿ ಕೃಷಿ ಮಾಹಿತಿ ಹಾಗೂ ಸಂವಾದ ಕಾರ್ಯಕ್ರಮ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಮೊಗ್ರು: ಜೈ ಶ್ರೀ ರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ–ಮುಗೇರಡ್ಕ ಇದರ 25 ನೇ ವರ್ಷದ ರಜತ ಪಥ ಪ್ರಯುಕ್ತ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಶ್ರೀ ದೇವಿ ಮಹಾತ್ಮೆ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಜೆಪಿ ಅಟ್ಯಾಕ್ರ್ಸ್ ಪ್ರಾಯೋಜಕತ್ವದಲ್ಲಿ ತಾಲೂಕು ಮಟ್ಟದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!