September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

ಮುಂಡೂರು : ಮುಂಡೂರು ಗ್ರಾಮದ ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಮೇ 16ರಂದು ಬೆಳಗ್ಗೆ ವೆಂಕಟೇಶ ಶಾಂತಿ ಶಂಭೂರು ಅವರ ನೇತೃತ್ವದಲ್ಲಿ ನಾಲ್ಕುಗುತ್ತು, ಬರ್ಕೆ ಗ್ರಾಮಗಳಿಗೆ ಸಂಬಂಧಪಟ್ಟ ಜೂಮ್ರ ಜುಮಾದಿ ದೈವಗಳ ಪುನರ್ ಪ್ರತಿಷ್ಠಾಪನೆ ನಡೆಯಿತು.


ಮೇ 15ರಂದು ಬೆಳಗ್ಗೆ ಪಾಪಿನಡೆಗುತ್ತಿನ ಕುಟುಂಬಸ್ಥರ ಧರ್ಮ ಚಾವಡಿಯಲ್ಲಿ ಗಣಹೋಮ, ಮೂಲ ನಾಗಬನದಲ್ಲಿ ನಾಗಬ್ರಹ್ಮ ದೇವರಿಗೆ ತನುತಂಬಿಲ ಸೇವೆ, ಧರ್ಮಚಾವಡಿಯಲ್ಲಿ ದೈವಗಳಿಗೆ ಪಂಚಪರ್ವ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಸಂಜೆ ಜೂಮ್ರ ಜುಮಾದಿ ದೈವಸ್ಥಾನದ ಎದುರಲ್ಲಿ ಸಾಮೂಹಿಕ ಪ್ರಾರ್ಥನೆ, ದೀಪ ಪ್ರಜ್ವಲನೆ, ಸಪ್ತಶುದ್ದಿ ಶಿಲ್ಪವರ್ಣ, ಪಂಚಗವ್ಯ ಮೇಲನ ಸ್ವಸ್ತಿ ಪುಣ್ಯಾಹವಾಚನ, ರಾಕ್ಟೋಘ್ನ ಹೋಮ, ವಾಸ್ತುಪೂಜೆ, ವಾಸ್ತುಹೋಮ, ವಾಸ್ತು ಬಲಿ, ಪ್ರಕಾರ ಬಲಿ, ಪ್ರಕಾರ ಶುದ್ದಿ, ಬಿಂಬ ಶುದ್ದಿ, ಧಾನ್ಯಾಧಿವಾಸ, ಶಯನಾಧಿವಾಸ, ಅನ್ನಸಂತರ್ಪಣೆ ನಡೆಯಿತು.
ಮೇ 16ರಂದು ಬೆಳಗ್ಗೆ ಗಣಪತಿಹೋಮ, ತೋರಣ ಮುಹೂರ್ತ, ಶಿಖರ ಪ್ರತಿಷ್ಠೆ ನವಕ ಕಲಶ ಪೂಜೆ, ನವಕ ಪ್ರಧಾನ ಹೋಮ, ಬೆಳಗ್ಗೆ ದೈವ ಪ್ರತಿಷ್ಠೆ ಪ್ರತಿಷ್ಠಾ ಹೋಮ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಪ್ರಸನ್ನ ಪೂಜೆ, ಪ್ರಸಾದ ವಿತರಣೆ ನಡೆಯಿತು.

ಕಾಯ೯ಕ್ರಮಗಳಲ್ಲಿ ಪ್ರತಿಷ್ಠಾನದ ಅಧ್ಯಕ್ಷ ಮುಂಡೂರು ಶ್ರೀಕ್ಷೇತ್ರ ಮಂಗಳಗಿರಿಯ ಧರ್ಮದರ್ಶಿ ರಾಜೀವ, ಪ್ರತಿಷ್ಠಾನದ ಪದಾಧಿಕಾರಿಗಳು, ಕುಟುಂಬಸ್ಥರು, ನಾಲ್ಕು ಗ್ರಾಮಗಳ ಭಕ್ತರು ಭಾಗವಹಿಸಿದ್ದರು.


ರಾತ್ರಿ 8 ಗಂಟೆಗೆ ಅನ್ನಸಂತರ್ಪಣೆ, ರಾತ್ರಿ 8.30ಕ್ಕೆ ಜೂಮ್ರ, ಜುಮಾದಿ ದೈವಗಳ ನೇಮೋತ್ಸವ ನಡೆಯಲಿದೆ .


Related posts

ಧರ್ಮಸ್ಥಳ: ಬೊಳಿಯಾರುನಲ್ಲಿ ಕಾಡಾನೆಗಳು ಎಳೆದ ಮರ, ವಿದ್ಯುತ್ ಲೈನಿನ ಮೇಲೆ ಬಿದ್ದು ಕಂಬಗಳಿಗೆ ಹಾನಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಶಿಶಿಲ: ಹೇವಾಜೆ ಶಾಲೆಯ ಹಿಂಬದಿ ಗುಡ್ಡ ಜರಿತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಡಾ|| ವೀರೇoದ್ರ ಹೆಗ್ಗಡೆಯವರ ಪಟ್ಟಾಭಿಷೇಕದ ವರ್ಧoತಿ ಪ್ರಯುಕ್ತ ಗೌರವಾರ್ಪಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಜೆಸಿಐ ಕೊಕ್ಕಡ ಕಪಿಲ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ಕೊಕ್ಕಡ ಗ್ರಾ.ಪಂ. ಸ್ವಚ್ಛತಾ ಸಂಕೀರ್ಣಕ್ಕೆ ಭೇಟಿ

Suddi Udaya
error: Content is protected !!