September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

ಉಜಿರೆ: ಯಾವಾಗಲೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೊಂದಿಗೆ ಮುಕ್ತವಾಗಿ ಪ್ರೀತಿ-ವಿಶ್ವಾಸದಿಂದ ಬೆರೆಯಬೇಕು. ನಮ್ಮ ಆಚಾರ-ವಿಚಾರ, ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆೆ ಹೇಳಿದರು.


ಅವರು ಮೇ 17 ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ ಭವನದಲ್ಲಿ  ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 75 ವರ್ಷ ದಾಟಿದ ಹಿರಿಯ ನಾಗರಿಕರನ್ನು ಗೌರವಿಸಿ ಮಾತನಾಡಿದರು.


ಯಾರೂ ಸಾವಿಗೆ ಹೆದರಬೇಕಾಗಿಲ್ಲ ಏಕೆಂದರೆ ಸಾವು ಬರುವಾಗ ನಾವು ಇರುವುದಿಲ್ಲ. ನಾವು ಇರುವಷ್ಟು ದಿನ ಸಾವು ಬರುವುದಿಲ್ಲ. ಯಾವಾಗಲೂ ಪರಿಶುದ್ಧ ಮನದಿಂದ  ಉತ್ತಮ ಸೇವಾ ಕಾರ್ಯಗಳನ್ನು ಮಾಡಬೇಕು. ಇದರಿಂದ ಅಪರಿಮಿತ ಸಂತೋಷ ಮತ್ತು ತೃಪ್ತಿ ಸಿಗುತ್ತದೆ ಎಂದು ಅವರು ಹೇಳಿದರು.


ಕೂಸಪ್ಪ ಗೌಡ, ದೇಜಪ್ಪ, ಚಾಕೊಚನ್, ಯಶೋದಾ, ಮಹಮ್ಮದ್, ಪುಷ್ಪಾ, ವೇಣೂರು, ನಮಿರಾಜ, ಆನಂದ ಶೆಟ್ಟಿ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಅವರನ್ನು ಗೌರವಿಸಲಾಯಿತು.
ಸನ್ಮಾನಿತರ ಪರವಾಗಿ ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಕೃತಜ್ಞತೆ ವ್ಯಕ್ತಪಡಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ವಿಶ್ವಾಸ ರಾವ್ ಧನ್ಯವಾದವಿತ್ತರು.

Related posts

ತಾಲೂಕು ಮರಾಟಿ ಸಮಾಜ ಸೇವಾ ಸಂಘದ ಮಾಸಿಕ ಸಭೆ

Suddi Udaya

ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪ್ರಕರಣ: ಚಿಕಿತ್ಸೆ ಫಲಿಸದೆ ಕಾಲೇಜು ವಿದ್ಯಾರ್ಥಿ ಸಾವು

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya

ಪ.ಜಾತಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ನಾಲ್ಕೂರು: ಬಾಲಸ್ನೇಹಿ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕರ ದಿನಾಚರಣೆ: ಪುಟಾಣಿ ಮಕ್ಕಳು ಪ್ರೀತಿಯ ಗುರುಗಳಿಗೆ ಪೆನ್ನು,ಹೂ ನೀಡಿ ಗೌರವ ಸಲ್ಲಿಕೆ

Suddi Udaya
error: Content is protected !!