30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

ಮಡಂತ್ಯಾರು : ಕೊಯ್ಯೂರು ಕೊಯಿರೊಟ್ಟು ಗುಳಿಗ ಸಾನಿಧ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಮಂಟಪ ಹಾಗೂ ರಾತ್ರಿ ದೈವದ ಗಗ್ಗರ ಸೇವೆ ವರ್ಷವಾಧಿ ಅಗೇಲು ಸೇವೆ ಮೇ.11 ರಂದು ನಡೆಯಿತು.

ಕೊಯ್ಯೂರು ಬ್ರಹ್ಮ ಶ್ರೀ ವೇ। ಮೂ। ನಂದಕುಮಾರ ತಂತ್ರಿಗಳು ನೇತೃತ್ವದಲ್ಲಿ ಶ್ರೀ ಗುಳಿಗ ಪ್ರತಿಷ್ಠಾ ಮಹೋತ್ಸವ-ಕಲಶಾಭಿಷೇಕ ಪ್ರಸನ್ನ ಪೂಜೆ, ಮಹಾ ಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಬೆಳಾಲು ಶ್ರೀ ‍ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್, ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ, ಕೊಯ್ಯೂರು ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ಅಶೋಕ ಕುಮಾರ್ ಭಾಂಗಿಣ್ಣಾಯ, ಕೊಯರೊಟ್ಟು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ. ಬಿ. ಹರೀಶ್ಚಂದ್ರ ಬಲ್ಲಾಳ್, ಆಡಳಿತ ಮುಖ್ಯಸ್ಥರು ಸಂಜೀವ ಗೌಡ ನೋಡಬೈಲು,ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ಗೌಡ, ಕೋಶಾಧಿಕಾರಿ ಡೀಕಯ್ಯ ಪೂಜಾರಿ, ಕಾರ್ಯದರ್ಶಿ ವಿನಯ ಪ್ರಸಾದ್,
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ದುಗ್ಗಪ್ಪ ಗೌಡ ಕೊಯ್ಯೂರು,
ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಗೌಡ ಪುರಿಯಾಳ, ಸಮಿತಿ ಸದಸ್ಯರಾದ ಯತೀಶ್ ಗೌಡ, ದಡ್ಡು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸನ್ಮಾನ: ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬೆಳ್ತಂಗಡಿ ನೋಟರಿ ವಕೀಲರಾದ ಶ್ರೀನಿವಾಸ ಗೌಡ ಬೆಳಾಲು ಇವರನ್ನು ಸನ್ಮಾನಿಸಲಾಯಿತು.

Related posts

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಪ್ರತಿಭಾ ಕಾರಂಜಿ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ‌. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಲಾಯಿಲ: ಆಟೋ ರಿಕ್ಷಾಕ್ಕೆ ಕಾರು ಡಿಕ್ಕಿ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!