March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದಿಂದಿಗೆ ಮೇ 17ರಿಂದ 23 ವರೆಗೆ ಸಂಜೆ 6 ರಿಂದ 8 ರವರೆಗೆ ಬೆಳ್ತಂಗಡಿ ಸಮಾಜ ಮಂದಿರದಲ್ಲಿ ನಡೆಯಲಿದ್ದು ಮೇ. 17 ಇಂದು ಸಂಜೆ ಚಾಲನೆ ನೀಡಲಾಯಿತು. ‌

ಉಜಿರೆ ನಿನಾದ ಸೋನಿಯಾ ಯಶೋವರ್ಮ ದೀಪ ಪ್ರಜ್ವಲಿಸಿ ಭಗವದ್ಗೀತೆ ದೇಶದ ದೊಡ್ಡ ಸಂಪತ್ತು ಎಂದರು.ಪ್ರಸಿದ್ದ ಪ್ರವಚನಕಾರರಾದ ವೀಣಾ ಬನ್ನಂಜೆ,ನಾವೂರು ಆರೋಗ್ಯ ಕ್ಲಿನಿಕ್‌ನ ವೈದ್ಯ ಪ್ರದೀಪ್ ಆಟಿಕುಕ್ಕೆ, ಕೃಷಿಕ ಹಿರಿಯ ಸಹಕಾರಿ ಎಂ.ಜನಾರ್ದನ ಪೂಜಾರಿ ಗೇರುಕಟ್ಟೆ,ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿ ಉಪಾಧ್ಯಕ್ಷ ಗಂಗಾಧರ ಮಿತ್ತಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮ ಸಂಯೋಜಕ ಚರಣ್ ಕುಮಾರ್ ಕುರ್ತೋಡಿ ಸೇರಿದಂತೆ ವಿವಿಧ ಕ್ಷೇತ್ರದ ಪ್ರಮುಖರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಭಗವದ್ಗೀತ ಪ್ರವಚನ ಸಪ್ತಾಹದಲ್ಲಿ ಭಾಗವಹಿಸಿದರು.

ಸುರೇಶ್ ಇವರಿಂದ ಪ್ರಾರ್ಥನೆ ಹಾಡಿದರು‌.ನಿವೃತ ಸಂಸ್ಕೃತ ಉಪನ್ಯಾಸಕರಾದ ಶ್ರೀಶ ಕುಮಾರ್ ಪ್ರಸ್ತಾವಿಕ ಮಾತನಾಡಿದರು.ಮೋಹನ್ ಶೆಟ್ಟಿಗಾರ್ ಸ್ವಾಗತಿಸಿ,ಸುಧಾಮಣಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಿರಿಯ ಸದಸ್ಯೆ ಲ. ಸುಶೀಲಾ ಎಸ್ ಹೆಗ್ಡೆಯವರಿಂದ ಅರ್ಹ ಕುಟುಂಬಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಇಲಂತಿಲ ಗ್ರಾ.ಪಂ. ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 50453 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಗುರು ಪೂಜೆ ಹಾಗೂ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!