26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದುವೆ ಜೌತಣ ಕೂಟ: ಊಟ ಮಾಡಿದ ಹಲವು ಮಂದಿ ಅಸ್ವಸ್ಥ ಪ್ರಕರಣ : ಗ್ರಾಮಕ್ಕೆ ಜಿಲ್ಲಾ ಆರೋಗ್ಯ ಅಧಿಕಾರಿಗಳ ತಂಡ ಭೇಟಿ

ಬೆಳ್ತಂಗಡಿ : ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ಮದುವೆಯ ಆರತಕ್ಷತೆ ಕಾರ್ಯಕ್ರಮದಲ್ಲಿ ಊಟ ಮಾಡಿದ ನಂತರ ಹಲವು ಮಂದಿ ಅಸ್ವಸ್ಥರಾಗಿದ್ದು ಸ್ಥಳಕ್ಕೆ ದ.ಕ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಊಟ ಮಾಡಿ ಅಸ್ವಸ್ಥಗೊಂಡವರ ಪೈಕಿ ಕೆಲವರು ಚೇತರಿಸಿಕೊಳ್ಳುತ್ತಿದ್ದರೆ ಇನ್ನೊಂದೆಡೆ ಅಸ್ವಸ್ಥರಾಗುವವರ ಸಂಖ್ಯೆ ಏರುತ್ತಲೇ ಇದೆ, ಆತಂಕಕಾರಿ ಸಂಗತಿ ಎಂದರೆ ಆರತಕ್ಷತೆ ಮನೆಗೆ ಹೋಗದವರೂ ವೆಜ್ ಊಟ ಮಾಡಿದವರೂ ಅಸ್ವಸ್ಥರಾಗಿ ಆಸ್ಪತ್ರೆ ಸೇರಿ ಗಂಭೀರ ಸ್ಥಿತಿಯಲ್ಲಿರುವುದು ಗುತ್ತಿರುವುದು ಬೆಳಕಿಗೆ ಬಂದಿದೆ. ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ, ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಮತ್ತಿತರ ಅಧಿಕಾರಿಗಳ ತಂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದು ಚಿಕಿತ್ಸೆ ಪಡೆಯುತ್ತಿರುವವರ ಆರೋಗ್ಯದ ಬಗ್ಗೆ ನಿಗಾ ಇಡುವುದರ ಜೊತೆಗೆ ಸಾಂಕ್ರಾಮಿಕ ಸೋಂಕನ್ನು ನಿಯಂತ್ರಿಸಬೇಕು ಎಂದು ವೈದ್ಯರಿಗೆ ಸೂಚನೆ ನೀಡಿದ್ದಾರೆ.


ಬೆಳ್ತಂಗಡಿ ತಾಲೂಕು ಬಂದಾರು ಗ್ರಾಮದ ಕೊಪ್ಪದಡ್ಕ ಸಮೀಪದ ಪಿಲತ್ತಿಮಾರು ನಿವಾಸಿ ಗಂಗಯ್ಯ ಗೌಡ ಎಂಬವರ ಪುತ್ರಿಯ ಮದುವೆಯ ಮರುದಿನ ನಡೆದ ಆರತಕ್ಷತೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾಂಸಾಹಾರದ ಭೋಜನ ಸೇವಿಸಿದ ಬೆನ್ನಲ್ಲೇ ಮಹಿಳೆಯರು, ಮಕ್ಕಳು ಸೇರಿದಂತೆ ಸುಮಾರು ಐವತ್ತಕ್ಕೂ ಅಧಿಕ ಮಂದಿ ವಾಂತಿ ಭೇದಿ ಮತ್ತಿತರ ರೀತಿಯಲ್ಲಿ ಅಸ್ವಸ್ಥರಾಗಿ ಮಂಗಳೂರು ವೆನ್ಲಾಕ್ ಸೇರಿದಂತೆ ಉಜಿರೆ, ಉಪ್ಪಿನಂಗಡಿಯ ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ.


ಕೆಲವರು ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು ಇನ್ನೊಂದೆಡೆ ಅಸ್ವಸ್ಥರ ಸಂಖ್ಯೆ ಏರುತ್ತಲೇ ಇದ್ದು ಆರಕ್ಷತೆ ಮನೆಯಲ್ಲಿ ಊಟ ಸೇವಿಸಿದವರ ಆತಂಕಕ್ಕೆ ಕಾರಣವಾಗಿದೆ. ಆರತಕ್ಷತೆ ಮನೆಯ ಭೋಜನ ಸೇವಿಸಿದ ಮದುಮಗ ಸೇರಿದಂತೆ ಸುಮಾರು ೫೦ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಈ ಪೈಕಿ ವೆನ್ಲಾಕ್ ಆಸ್ಪತ್ರೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಸ್ಥಳೀಯ ಕಮಲಾ ಎಂಬವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದರು. ಸುಮಾರು ೧೦ಕ್ಕೂ ಹೆಚ್ಚು ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಐಸಿಯೂ ಚಿಕಿತ್ಸೆ ಪಡೆಯುತ್ತಿದ್ದು ಈ ಸಮಸ್ಯೆಯು ಸಾಂಕ್ರಾಮಿಕವಾಗಿ ಪರಿಣಮಿಸಿ ಹರಡಿಕೊಳ್ಳುತ್ತಿದೆಯೇ ಎಂಬ ಆತಂಕ ಮೂಡಲು ಕಾರಣವಾಗಿದೆ. ಮೇ ೧೧ನೇ ಭಾನುವಾರ ನಡೆದ ಮದುವೆಯ ಆರತಕ್ಷತೆಯು ಮೇ೧೨ ಸೋಮವಾರ ವಧುವಿನ ಮನೆಯಲ್ಲಿ ನಡೆದಿತ್ತು.


ಡಿಹೆಚ್ ಒ ,ಟಿಹೆಚ್ ಒ. ತಂಡ ಭೇಟಿ:
ಬಂದಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಹಲವರ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಶನಿವಾರ ಬಂದಾರು ಗ್ರಾಮಕ್ಕೆ ಭೇಟಿ ನೀಡಿರುವ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಆರ್ ತಿಮ್ಮಯ್ಯ ತಾಲೂಕು ಆರೋಗ್ಯಾಧಿಕಾರಿ ಡಾ.ಸಂಜಾತ್ ಮುಂತಾದವರ ತಂಡ ಮಾಹಿತಿ ಸಂಗ್ರಹಿಸಿದೆ. ಗ್ರಾ.ಪಂ. ಅಂಬೇಡ್ಕರ್ ಭವನದಲ್ಲಿ ಸಭೆ ನಡೆಸಿದ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್. ಆರ್. ತಿಮ್ಮಯ್ಯ ಅವರು ಮಾತನಾಡಿ ಮಚ್ಚಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಕಣಿಯೂರು ಸಮುದಾಯ ಆರೋಗ್ಯ ಕೇಂದ್ರಗಳ ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ತಂಡಗಳು ಬಂದಾರು ಗ್ರಾ.ಪಂ. ವ್ಯಾಪ್ತಿಯಲ್ಲಿ ಈ ಘಟನೆಯಲ್ಲಿ ಅಸ್ವಸ್ಥಗೊಂಡವರ ಮನೆಗಳಿಗೆ ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸಿ ವಿವರ ಸಂಗ್ರಹಿಸುವಂತೆ ಸೂಚಿಸಿದ್ದಾರೆ.
ಮೇಲ್ನೋಟಕ್ಕೆ ಕಾಣುವಂತೆ ಅಸ್ವಸ್ಥರಾಗಲು ಫುಡ್ ಪಾಯ್ಸನ್ ಕಾರಣವೆಂದು ಈಗಲೇ ಹೇಳಲು ಕಷ್ಟ, ಫುಡ್ ಪಾಯ್ಸನ್ ಆಗಿದ್ರೆ ಒಂದೇ ದಿನದಲ್ಲಿ ಎಲ್ಲರಲ್ಲೂ ಹರಡುತ್ತದೆ,


ಇದೊಂದು ಸಾಂಕ್ರಾಮಿಕ ಸೋಂಕು ಆಗಿರುವ ಸಾಧ್ಯತೆ ಇದೆ, ವೆನ್ಲಾಕ್ , ಉಜಿರೆ, ಉಪ್ಪಿನಂಗಡಿ ಬೇರೆ ಬೇರೆ ಆಸ್ಪತ್ರೆಗಳಲ್ಲಿ ದಾಖಲಾದವರ ವಾಂತಿ, ಭೇದಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷಿಸಿದ ಬಳಿಕ ಪರಿಪೂರ್ಣ ವರದಿಯ ಆಧಾರದಲ್ಲಿ ಸಾಮೂಹಿಕ ಅಸ್ವಸ್ಥತೆಗೆ ನಿಖರ ಕಾರಣವನ್ನು ತಿಳಿಯಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಸಂದರ್ಭ ದ.ಕ. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನವೀನ್ ಚಂದ್ರ ಕುಲಾಲ್, ಕಣಿಯೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುನೀಲ್ ಕುಮಾರ್ ಕೆ, ತಾಲೂಕು ಆರೋಗ್ಯ ಕೇಂದ್ರದ ಹಿ.ಆ.ನಿ. ಸೋಮನಾಥ್, ಗ್ರಾ.ಪಂ. ಅಧ್ಯಕ್ಷ ದಿನೇಶ್ ಕಂಡಿಗ , ಪಂ. ಅಭಿವೃದ್ಧಿ ಅಧಿಕಾರಿ ಪುರುಷೋತ್ತಮ ಪೂಜಾರಿ, ಉಪಸ್ಥಿತರಿದ್ದರು. ಆಶಾ ಕಾರ್ಯಕರ್ತೆಯರು ಇದ್ದರು.

Related posts

ಏ.7: : ಶ್ರೀ ದುರ್ಗಾ ಬ್ಯಾಟರಿ ಸೋಲಾರ್ ಮತ್ತು ಆಟೋ ಎಲೆಕ್ಟ್ರಿಕಲ್ ವರ್ಕ್ಸ್ ಶುಭಾರಂಭ

Suddi Udaya

ಇಂದು ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ: ಬೆಳ್ತಂಗಡಿ ತಾಲೂಕಿನ ಮೂರು ಮತಗಟ್ಟೆಗಳಲ್ಲಿ ನಡೆಯುತ್ತಿರುವ ಮತದಾನ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಕೊಕ್ಕಡ: ಕಲಾಯಿ ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಬಂಗಾಡಿ ಫ್ರೆಂಡ್ಸ್ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಲಯ ಮಟ್ಟದ ಪುರುಷರ ಹಗ್ಗ ಜಗ್ಗಾಟ:

Suddi Udaya
error: Content is protected !!