25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ.

ಇಂದು (ಮೇ 17) ಪೂರ್ವಾಹ್ನ ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀನಿವಾಸ ಮೂಡೆತ್ತಾಯ ಮತ್ತು ಉತ್ಸವ ಸಮಿತಿ ಸದಸ್ಯರು, ಆಡಳಿತಾಧಿಕಾರಿ ದಿನೇಶ್ ಎಂ.
, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಅಂಗಣೋತ್ಸವ, ಬಂಗರಕಟ್ಟೆ ಪೂಜೆ, ಮೇ 18ರಂದು ಪೂರ್ವಾಹ್ನ ಅಂಗಣೋತ್ಸವ ರಾತ್ರಿ “ಮಹಾ ರಥೋತ್ಸವ”, ಕವಾಟ ಬಂಧನ. ಮೇ 19 ರಂದು ಪೂರ್ವಾಹ್ನ ಕವಾಟೋದ್ಘಾಟನೆ, ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭ್ರತೋತ್ಸವ, ಧ್ವಜ ಅವರೋಹಣ, ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ. ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ, ಮೇ 21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಸರಕಾರಕ್ಕೆ ಮನವಿ

Suddi Udaya

ಇಂತಹ ಘಟನೆ ಮತ್ತೆ ಎಂದೂ ಮರುಕಳಿಸದಿರಲಿ : ಅಭಿನಂದನ್ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಲಾಯಿಲ : ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರ ವಿತರಣೆ

Suddi Udaya

ಮಾ.2: ಭಾರತ್ ಬ್ಯಾಂಕ್ ಮುಂಬೈ ಇದರ ಬೆಳ್ತಂಗಡಿ ಕಚೇರಿ ಆರಂಭ: ಕೇಂದ್ರ ಬ್ಯಾಂಕಿನ ಅಧ್ಯಕ್ಷ-ಉಪಾಧ್ಯಕ್ಷರಿಂದ ಅಧಿಕೃತ ಉದ್ಘಾಟನೆ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya
error: Content is protected !!