25.6 C
ಪುತ್ತೂರು, ಬೆಳ್ತಂಗಡಿ
September 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ.

ಇಂದು (ಮೇ 17) ಪೂರ್ವಾಹ್ನ ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀನಿವಾಸ ಮೂಡೆತ್ತಾಯ ಮತ್ತು ಉತ್ಸವ ಸಮಿತಿ ಸದಸ್ಯರು, ಆಡಳಿತಾಧಿಕಾರಿ ದಿನೇಶ್ ಎಂ.
, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಅಂಗಣೋತ್ಸವ, ಬಂಗರಕಟ್ಟೆ ಪೂಜೆ, ಮೇ 18ರಂದು ಪೂರ್ವಾಹ್ನ ಅಂಗಣೋತ್ಸವ ರಾತ್ರಿ “ಮಹಾ ರಥೋತ್ಸವ”, ಕವಾಟ ಬಂಧನ. ಮೇ 19 ರಂದು ಪೂರ್ವಾಹ್ನ ಕವಾಟೋದ್ಘಾಟನೆ, ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭ್ರತೋತ್ಸವ, ಧ್ವಜ ಅವರೋಹಣ, ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ. ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ, ಮೇ 21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರ್ಕಾರದ ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘ: ಅಧ್ಯಕ್ಷರಾಗಿ ಅಶೋಕ್ ಪೂಜಾರಿ, ಉಪಾಧ್ಯಕ್ಷರಾಗಿ ಮೋಹನಂದ ಪೂಜಾರಿ

Suddi Udaya

ಕಲ್ಮಂಜ ಶ್ರೀ ಸತ್ಯನಾರಾಯಣ ಯಕ್ಷಗಾನ ತರಬೇತಿ ಕೇಂದ್ರದ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಕೊಕ್ಕಡ: ಸರಕಾರಿ ಹಿ.ಪ್ರಾ. ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya
error: Content is protected !!