24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಮಂಡಲದ ವತಿಯಿಂದ ನಮ್ಮ ಮಣ್ಣು ನಮ್ಮ ದೇಶ ಕಾರ್ಯಕ್ರಮ

Suddi Udaya

ಗುರುವಾಯನಕೆರೆಯಲ್ಲಿ ಡಾ. ಸವನ್ ರೈ ಬಾರ್ದಡ್ಕ ಬಳಂಜರವರ ಶ್ರೀ ಹಿತ ಡೆಂಟಲ್ ಝೋನ್ ಶುಭಾರಂಭ

Suddi Udaya

ಮಂಗಳೂರು ವಿ. ವಿ. ಅಂತರ್ ಕಾಲೇಜು ಪುರುಷರ ಕ್ರಿಕೆಟ್: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಸತತ ಮೂರನೇ ಬಾರಿಗೆ ಚಾಂಪಿಯನ್

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya
error: Content is protected !!