22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

ಉಜಿರೆ: ಯಾವಾಗಲೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೊಂದಿಗೆ ಮುಕ್ತವಾಗಿ ಪ್ರೀತಿ-ವಿಶ್ವಾಸದಿಂದ ಬೆರೆಯಬೇಕು. ನಮ್ಮ ಆಚಾರ-ವಿಚಾರ, ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆೆ ಹೇಳಿದರು.


ಅವರು ಮೇ 17 ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ ಭವನದಲ್ಲಿ  ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 75 ವರ್ಷ ದಾಟಿದ ಹಿರಿಯ ನಾಗರಿಕರನ್ನು ಗೌರವಿಸಿ ಮಾತನಾಡಿದರು.


ಯಾರೂ ಸಾವಿಗೆ ಹೆದರಬೇಕಾಗಿಲ್ಲ ಏಕೆಂದರೆ ಸಾವು ಬರುವಾಗ ನಾವು ಇರುವುದಿಲ್ಲ. ನಾವು ಇರುವಷ್ಟು ದಿನ ಸಾವು ಬರುವುದಿಲ್ಲ. ಯಾವಾಗಲೂ ಪರಿಶುದ್ಧ ಮನದಿಂದ  ಉತ್ತಮ ಸೇವಾ ಕಾರ್ಯಗಳನ್ನು ಮಾಡಬೇಕು. ಇದರಿಂದ ಅಪರಿಮಿತ ಸಂತೋಷ ಮತ್ತು ತೃಪ್ತಿ ಸಿಗುತ್ತದೆ ಎಂದು ಅವರು ಹೇಳಿದರು.


ಕೂಸಪ್ಪ ಗೌಡ, ದೇಜಪ್ಪ, ಚಾಕೊಚನ್, ಯಶೋದಾ, ಮಹಮ್ಮದ್, ಪುಷ್ಪಾ, ವೇಣೂರು, ನಮಿರಾಜ, ಆನಂದ ಶೆಟ್ಟಿ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಅವರನ್ನು ಗೌರವಿಸಲಾಯಿತು.
ಸನ್ಮಾನಿತರ ಪರವಾಗಿ ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಕೃತಜ್ಞತೆ ವ್ಯಕ್ತಪಡಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ವಿಶ್ವಾಸ ರಾವ್ ಧನ್ಯವಾದವಿತ್ತರು.

Related posts

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ : ಎ.3 ರಂದು ಬಿ.ಎಸ್.ಪಿ ಯ ಅಭ್ಯರ್ಥಿ ಕಾಂತಪ್ಪ ಅಲಂಗಾರ್ ನಾಮಪತ್ರ ಸಲ್ಲಿಕೆ

Suddi Udaya

ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ 8 ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಬೆಂಬಲಿತ 5 ಅಭ್ಯರ್ಥಿಗಳು ಅವಿರೋಧ ಆಯ್ಕೆ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
error: Content is protected !!