25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

ಉಜಿರೆ: ಯಾವಾಗಲೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೊಂದಿಗೆ ಮುಕ್ತವಾಗಿ ಪ್ರೀತಿ-ವಿಶ್ವಾಸದಿಂದ ಬೆರೆಯಬೇಕು. ನಮ್ಮ ಆಚಾರ-ವಿಚಾರ, ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆೆ ಹೇಳಿದರು.


ಅವರು ಮೇ 17 ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ ಭವನದಲ್ಲಿ  ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 75 ವರ್ಷ ದಾಟಿದ ಹಿರಿಯ ನಾಗರಿಕರನ್ನು ಗೌರವಿಸಿ ಮಾತನಾಡಿದರು.


ಯಾರೂ ಸಾವಿಗೆ ಹೆದರಬೇಕಾಗಿಲ್ಲ ಏಕೆಂದರೆ ಸಾವು ಬರುವಾಗ ನಾವು ಇರುವುದಿಲ್ಲ. ನಾವು ಇರುವಷ್ಟು ದಿನ ಸಾವು ಬರುವುದಿಲ್ಲ. ಯಾವಾಗಲೂ ಪರಿಶುದ್ಧ ಮನದಿಂದ  ಉತ್ತಮ ಸೇವಾ ಕಾರ್ಯಗಳನ್ನು ಮಾಡಬೇಕು. ಇದರಿಂದ ಅಪರಿಮಿತ ಸಂತೋಷ ಮತ್ತು ತೃಪ್ತಿ ಸಿಗುತ್ತದೆ ಎಂದು ಅವರು ಹೇಳಿದರು.


ಕೂಸಪ್ಪ ಗೌಡ, ದೇಜಪ್ಪ, ಚಾಕೊಚನ್, ಯಶೋದಾ, ಮಹಮ್ಮದ್, ಪುಷ್ಪಾ, ವೇಣೂರು, ನಮಿರಾಜ, ಆನಂದ ಶೆಟ್ಟಿ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಅವರನ್ನು ಗೌರವಿಸಲಾಯಿತು.
ಸನ್ಮಾನಿತರ ಪರವಾಗಿ ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಕೃತಜ್ಞತೆ ವ್ಯಕ್ತಪಡಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ವಿಶ್ವಾಸ ರಾವ್ ಧನ್ಯವಾದವಿತ್ತರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ಅಧ್ಯಕ್ಷರಾಗಿ ರವಿ ಪೂಜಾರಿ, ಕಾರ್ಯದರ್ಶಿಯಾಗಿ ದಾಮೋದರ ಆಯ್ಕೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದಲ್ಲಿ ವನಮಹೋತ್ಸವ

Suddi Udaya

ಧೀಮತಿ ಜೈನ ಮಹಿಳಾ ಸಮಾಜದ ವತಿಯಿಂದ ಧಾರ್ಮಿಕ ಸಂವಾದ ಕಾರ್ಯಕ್ರಮ

Suddi Udaya
error: Content is protected !!