23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

ಮಡಂತ್ಯಾರು : ಕೊಯ್ಯೂರು ಕೊಯಿರೊಟ್ಟು ಗುಳಿಗ ಸಾನಿಧ್ಯದಲ್ಲಿ ನಿರ್ಮಾಣಗೊಂಡಿರುವ ನೂತನ ಮಂಟಪ ಹಾಗೂ ರಾತ್ರಿ ದೈವದ ಗಗ್ಗರ ಸೇವೆ ವರ್ಷವಾಧಿ ಅಗೇಲು ಸೇವೆ ಮೇ.11 ರಂದು ನಡೆಯಿತು.

ಕೊಯ್ಯೂರು ಬ್ರಹ್ಮ ಶ್ರೀ ವೇ। ಮೂ। ನಂದಕುಮಾರ ತಂತ್ರಿಗಳು ನೇತೃತ್ವದಲ್ಲಿ ಶ್ರೀ ಗುಳಿಗ ಪ್ರತಿಷ್ಠಾ ಮಹೋತ್ಸವ-ಕಲಶಾಭಿಷೇಕ ಪ್ರಸನ್ನ ಪೂಜೆ, ಮಹಾ ಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಬೆಳಾಲು ಶ್ರೀ ‍ಕ್ಷೇತ್ರ ಆರಿಕೋಡಿ ಧರ್ಮದರ್ಶಿಗಳಾದ ಹರೀಶ್, ಬೆಂಗಳೂರು ಉದ್ಯಮಿ ಕಿರಣ್ ಚಂದ್ರ ಡಿ.ಪುಷ್ಪಗಿರಿ, ಕೊಯ್ಯೂರು ದೇವಸ್ಥಾನದ ಪ್ರಧಾನ ಅರ್ಚಕರಾದ ಕೆ.ಅಶೋಕ ಕುಮಾರ್ ಭಾಂಗಿಣ್ಣಾಯ, ಕೊಯರೊಟ್ಟು ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಕೆ. ಬಿ. ಹರೀಶ್ಚಂದ್ರ ಬಲ್ಲಾಳ್, ಆಡಳಿತ ಮುಖ್ಯಸ್ಥರು ಸಂಜೀವ ಗೌಡ ನೋಡಬೈಲು,ಅಧ್ಯಕ್ಷರು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ಗೌಡ, ಕೋಶಾಧಿಕಾರಿ ಡೀಕಯ್ಯ ಪೂಜಾರಿ, ಕಾರ್ಯದರ್ಶಿ ವಿನಯ ಪ್ರಸಾದ್,
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಯೋಜನಾಧಿಕಾರಿ ದುಗ್ಗಪ್ಪ ಗೌಡ ಕೊಯ್ಯೂರು,
ಕೊಯ್ಯೂರು ಗ್ರಾಮ ಪಂಚಾಯತ್ ಸದಸ್ಯರಾದ ಯಶವಂತ ಗೌಡ ಪುರಿಯಾಳ, ಸಮಿತಿ ಸದಸ್ಯರಾದ ಯತೀಶ್ ಗೌಡ, ದಡ್ಡು ಹಾಗೂ ಭಕ್ತರು ಉಪಸ್ಥಿತರಿದ್ದರು.

ಸನ್ಮಾನ: ಉದ್ಯಮಿ ಕಿರಣ್ ಚಂದ್ರ ಡಿ. ಪುಷ್ಪಗಿರಿ, ಬೆಳ್ತಂಗಡಿ ನೋಟರಿ ವಕೀಲರಾದ ಶ್ರೀನಿವಾಸ ಗೌಡ ಬೆಳಾಲು ಇವರನ್ನು ಸನ್ಮಾನಿಸಲಾಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ನಾರಾವಿ ಸರಕಾರಿ ಪ್ರೌಢ ಶಾಲೆಯಲ್ಲಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ

Suddi Udaya

ಜೆ ಸಿ ಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್. ಎಸ್.ಎಲ್.ಸಿ ಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೇಘನಾ ರವರಿಗೆ ಸನ್ಮಾನ

Suddi Udaya

ಉಜಿರೆ: ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya
error: Content is protected !!