ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾ596 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಪಡೆದಿರುತ್ತಾರೆ.
ಅನಘಾ ಡಿ ಶೆಟ್ಟಿ 595 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಪಡೆದುಕೊಂಡಿದ್ದಾರೆ . ಆಕಾಶ್ ಹಾಗೂ ಯಶ್ವಿತಾ ಕುಲಾಲ್ ತಲಾ 591ಅಂಕಗಳೊಂದಿಗೆ 10ನೇ ರಾಂಕ್ ಪಡೆದಿರುತ್ತಾರೆ.
ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.
ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.











