July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ಕುಕ್ಕಾಜೆ ದಿ. ಕುಶಾಲಪ್ಪ ನಾಯ್ಕರ ಮನೆಯವರಿಗೆ ಧನಸಹಾಯ ಹಸ್ತಾಂತರ

Suddi Udaya

ಕುಕ್ಕೇಡಿ ಸ್ಫೋಟ ಪ್ರಕರಣ: ಮೃತ ಕುಟುಂಬಕ್ಕೆ ಬೆಳ್ತಂಗಡಿ ಕೆಎಸ್ಎಂಸಿಎ ಯಿಂದ ಸಹಾಯ ಹಸ್ತ

Suddi Udaya

ಮೂರನೆ ಭಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರ ಸ್ವೀಕಾರ: ಕುವೆಟ್ಟು ಬಿಜೆಪಿ ಕಾರ್ಯಕರ್ತರಿಂದ ಚಾ-ತಿಂಡಿ, ಸ್ವೀಟ್ ಹಂಚಿ, ಸುಡುಮದ್ದು ಪ್ರದರ್ಶನ ಮೂಲಕ ಸಂಭ್ರಮ

Suddi Udaya

ಧರ್ಮಸ್ಥಳ : ಅಜಿಕುರಿಯಲ್ಲಿ ಹೆಜ್ಜೇನು ದಾಳಿ: ಹಲವರಿಗೆ ಗಾಯ ಆಸ್ಪತ್ರೆಗೆ ದಾಖಲು

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!