25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ ಹಾಗೂ ಭಾಷಣ ಸ್ಪರ್ಧೆ -ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಥಮ ಹಾಗೂ ತೃತೀಯ ಸ್ಥಾನ

ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆ ಯಲ್ಲಿ ಪ್ರಥಮ ಬಹುಮಾನ ಹಾಗೂ “ ಭಾರತದಲ್ಲಿ ನಾಗರಿಕ ಪ್ರಜ್ಞೆ “ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನು ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪಡೆದಿರುತ್ತಾರೆ.

ಹಾಗೆಯೇ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

Related posts

ಮುಂಡಾಜೆ ಪದವಿ ಪೂರ್ವ ಕಾಲೇಜಿಗೆ ಶೇ.95.65 ಫಲಿತಾಂಶ

Suddi Udaya

ವಲಯ ಮಟ್ಟದ ಪ್ರೌಢ ಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆ- ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಅಪಘಾತದಲ್ಲಿ ಮೃತಪಟ್ಟ ಪದ್ಮುಂಜ ಸಿಎ ಬ್ಯಾಂಕ್ ಸಿಬ್ಬಂದಿ ಚಿದಾನಂದ ಗೌಡರಿಗೆ ಸಾರ್ವಜನಿಕರಿಂದ ಅಂತಿಮ ನಮನ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ಭರತನಾಟ್ಯ ವಿಧ್ವತ್ ಪೂರ್ವ ಪರೀಕ್ಷೆಯಲ್ಲಿ ಗುರುವಾಯನಕೆರೆಯ ಕು. ರಕ್ಷಾ ಶೆಣೈರವರಿಗೆ ಉತ್ತಮ ಶ್ರೇಣಿ

Suddi Udaya

ಯುವವಾಹಿನಿ ವೇಣೂರು ಘಟಕದ ವಾರ್ಷಿಕ ಮಹಾಸಭೆ: ಪದಾಧಿಕಾಗಳ ಆಯ್ಕೆ

Suddi Udaya
error: Content is protected !!