September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

ಉಜಿರೆ: ಯಾವಾಗಲೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೊಂದಿಗೆ ಮುಕ್ತವಾಗಿ ಪ್ರೀತಿ-ವಿಶ್ವಾಸದಿಂದ ಬೆರೆಯಬೇಕು. ನಮ್ಮ ಆಚಾರ-ವಿಚಾರ, ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆೆ ಹೇಳಿದರು.


ಅವರು ಮೇ 17 ರಂದು ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ ಭವನದಲ್ಲಿ  ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 75 ವರ್ಷ ದಾಟಿದ ಹಿರಿಯ ನಾಗರಿಕರನ್ನು ಗೌರವಿಸಿ ಮಾತನಾಡಿದರು.


ಯಾರೂ ಸಾವಿಗೆ ಹೆದರಬೇಕಾಗಿಲ್ಲ ಏಕೆಂದರೆ ಸಾವು ಬರುವಾಗ ನಾವು ಇರುವುದಿಲ್ಲ. ನಾವು ಇರುವಷ್ಟು ದಿನ ಸಾವು ಬರುವುದಿಲ್ಲ. ಯಾವಾಗಲೂ ಪರಿಶುದ್ಧ ಮನದಿಂದ  ಉತ್ತಮ ಸೇವಾ ಕಾರ್ಯಗಳನ್ನು ಮಾಡಬೇಕು. ಇದರಿಂದ ಅಪರಿಮಿತ ಸಂತೋಷ ಮತ್ತು ತೃಪ್ತಿ ಸಿಗುತ್ತದೆ ಎಂದು ಅವರು ಹೇಳಿದರು.


ಕೂಸಪ್ಪ ಗೌಡ, ದೇಜಪ್ಪ, ಚಾಕೊಚನ್, ಯಶೋದಾ, ಮಹಮ್ಮದ್, ಪುಷ್ಪಾ, ವೇಣೂರು, ನಮಿರಾಜ, ಆನಂದ ಶೆಟ್ಟಿ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಅವರನ್ನು ಗೌರವಿಸಲಾಯಿತು.
ಸನ್ಮಾನಿತರ ಪರವಾಗಿ ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಕೃತಜ್ಞತೆ ವ್ಯಕ್ತಪಡಿಸಿದರು.
ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ವಿಶ್ವಾಸ ರಾವ್ ಧನ್ಯವಾದವಿತ್ತರು.

Related posts

ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಸಹಾಯ ಕೇಂದ್ರ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಅತ್ಯಮೂಲ್ಯ ಮತ ಚಲಾಯಿಸಿದ 106 ವರ್ಷದ ಅಜ್ಜಿ:

Suddi Udaya

ಧರ್ಮಸ್ಥಳ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಟಿ.ಬಿ ಕ್ರಾಸ್ – ಕುತ್ರೊಟ್ಟು ಸಂಪರ್ಕ ರಸ್ತೆ ದುರಸ್ಥಿ ಆಗ್ರಹಿಸಿ ಪಂಚಾಯತ್ ಗೆ ಎಸ್‌ಡಿಪಿಐ ಮನವಿ

Suddi Udaya
error: Content is protected !!