September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾ596 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಪಡೆದಿರುತ್ತಾರೆ.

ಅನಘಾ ಡಿ ಶೆಟ್ಟಿ 595 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಪಡೆದುಕೊಂಡಿದ್ದಾರೆ . ಆಕಾಶ್ ಹಾಗೂ ಯಶ್ವಿತಾ ಕುಲಾಲ್ ತಲಾ 591ಅಂಕಗಳೊಂದಿಗೆ 10ನೇ ರಾಂಕ್ ಪಡೆದಿರುತ್ತಾರೆ.

ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.


ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಉಜಿರೆ ಶ್ರೀ ಧ. ಮಂ. ಕಾಲೇಜಿನಲ್ಲಿ ಐ.ಟಿ. ಕ್ಲಬ್ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮಡಂತ್ಯಾರು ಮೆಸ್ಕಾಂ ಕಛೇರಿಯಲ್ಲಿ ಕಂದಾಯ ಅದಾಲತ್‌ ಕಾರ್ಯಕ್ರಮ: ವಿದ್ಯುತ್ ಪರಿವರ್ತಕದ ಬೇಡಿಕೆಗೆ ಮನವಿ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಭಿವಿನ್ಯಾಸ ಕಾರ್ಯಕ್ರಮ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ ; ಸ್ಥಳೀಯರಿಂದ ತೆರವು ಕಾರ್ಯ

Suddi Udaya

ಗುರಿಪಳ್ಳ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗಿಡನಾಟಿ, ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
error: Content is protected !!