25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ದ್ವಿತೀಯ ಪಿಯುಸಿ ಪರೀಕ್ಷೆ-2 ರ ಫಲಿತಾಂಶ ಪ್ರಕಟ: ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದಲ್ಲಿ ಹಲವು ರ್‍ಯಾಂಕ್ ಗಳು

ಪುತ್ತೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಳೆದ ಏಪ್ರಿಲ್‌ನಲ್ಲಿ ನಡೆಸಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶ ಪ್ರಕಟಗೊಂಡಿದ್ದು, ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆಯನ್ನು ಮಾಡಿರುತ್ತಾರೆ. ವಿಜ್ಞಾನ ವಿಭಾಗದಲ್ಲಿ ಶ್ರೀರಕ್ಷಾ596 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಪಡೆದಿರುತ್ತಾರೆ.

ಅನಘಾ ಡಿ ಶೆಟ್ಟಿ 595 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರಾಂಕ್ ಪಡೆದುಕೊಂಡಿದ್ದಾರೆ . ಆಕಾಶ್ ಹಾಗೂ ಯಶ್ವಿತಾ ಕುಲಾಲ್ ತಲಾ 591ಅಂಕಗಳೊಂದಿಗೆ 10ನೇ ರಾಂಕ್ ಪಡೆದಿರುತ್ತಾರೆ.

ಇತ್ತೀಚೆಗೆ ಪ್ರಕಟಗೊಂಡ ಫಲಿತಾಂಶದಲ್ಲಿ ವಾಣಿಜ್ಯ ವಿಭಾಗದಲ್ಲಿ ಅನುಶ್ರೀ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ರಾಂಕ್ ತಾಲೂಕಿಗೆ ಪ್ರಥಮ ಸ್ಥಾನಿಯಾಗಿರುತ್ತಾರೆ. ಕಲಾವಿಭಾಗದಲ್ಲಿ ಪಿ. ಯುಕ್ತಶ್ರೀ 593 ಅಂಕಗಳೊಂದಿಗೆ ರಾಜ್ಯಕ್ಕೆ 5ನೇ ರಾಂಕ್ ಹಾಗೂ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿರುತ್ತಾರೆ.


ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಉಪಪ್ರಾಂಶುಪಾಲರು ಹಾಗೂ ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಗೇರುಕಟ್ಟೆ: ಸುಣ್ಣಲಡ್ಡದಲ್ಲಿ ತಡರಾತ್ರಿ ಮನೆಗೆ ನುಗ್ಗಿ ನಗದು ಕಳ್ಳತನ: ಬೆಳ್ತಂಗಡಿ ಪೊಲೀಸರು, ಶ್ವಾನದಳ ಮತ್ತು ಬೆರಳಚ್ಚು ತಜ್ಞರಿಂದ ತನಿಖೆ

Suddi Udaya

ಜನತೆಯ ನಾಡಿ ಮಿಡಿತ ಅರಿತು ವಿಕಸಿತ ಭಾರತದ ಬಜೆಟ್ ಮಂಡನೆ: ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಏಷ್ಯನ್ ಪೆಸಿಫಿಕ್ ಚಾಂಪಿಯನ್ ಶಿಪ್ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲೆಯ ಶಿಕ್ಷಕಿ ಶ್ರೀಮತಿ ಅಕ್ಕಮ್ಮ ರವರಿಗೆ ಚಿನ್ನದ ಪದಕ

Suddi Udaya
error: Content is protected !!