23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ

ಶಿಶಿಲ: ಶ್ರೀ ಶಿಶಿಲೇಶ್ವರ ದೇವಸ್ಥಾನ ಶಿಶಿಲದಲ್ಲಿ ಮೇ 13ರಿಂದ ಪ್ರಾರಂಭಗೊಂಡು ಮೇ 21 ರವರೆಗೆ ಕೆಮ್ಮಿಂಜೆ ಬ್ರಹ್ಮಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಜರುಗಲಿದೆ.

ಇಂದು (ಮೇ 17) ಪೂರ್ವಾಹ್ನ ಅಂಗಣೋತ್ಸವ “ದೇವರ ದರ್ಶನ ಬಲಿ”, ಬಟ್ಟಲು ಕಾಣಿಕೆ ನಡೆಯಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀನಿವಾಸ ಮೂಡೆತ್ತಾಯ ಮತ್ತು ಉತ್ಸವ ಸಮಿತಿ ಸದಸ್ಯರು, ಆಡಳಿತಾಧಿಕಾರಿ ದಿನೇಶ್ ಎಂ.
, ಅರ್ಚಕರು, ಅಭಿವೃದ್ಧಿ ಸಮಿತಿ ಸದಸ್ಯರು, ಸಿಬ್ಬಂದಿ ವರ್ಗ, ಪಾರಂಪರಿಕ ಸೇವಾಕರ್ತರು ಹಾಗೂ ಊರ ಪರವೂರ ಭಕ್ತಾದಿಗಳು ಉಪಸ್ಥಿತರಿದ್ದರು.

ಇಂದು ರಾತ್ರಿ ಅಂಗಣೋತ್ಸವ, ಬಂಗರಕಟ್ಟೆ ಪೂಜೆ, ಮೇ 18ರಂದು ಪೂರ್ವಾಹ್ನ ಅಂಗಣೋತ್ಸವ ರಾತ್ರಿ “ಮಹಾ ರಥೋತ್ಸವ”, ಕವಾಟ ಬಂಧನ. ಮೇ 19 ರಂದು ಪೂರ್ವಾಹ್ನ ಕವಾಟೋದ್ಘಾಟನೆ, ಮಹಾಪೂಜೆ ಸಂಜೆ ತೆಪ್ಪೋತ್ಸವ, ಕಟ್ಟೆಪೂಜೆ, ವಸಂತ ಕಟ್ಟೆಯಲ್ಲಿ ಓಕುಳಿ, ಮೀನಗುಂಡಿಯಲ್ಲಿ ಅವಭ್ರತೋತ್ಸವ, ಧ್ವಜ ಅವರೋಹಣ, ಪೂರ್ವಾಹ್ನ ಶ್ರೀ ಶಿಶಿಲೇಶ್ವರ ದೇವರ ಮೂಲಸ್ಥಾನ ಕುಮಾರಗುಡ್ಡೆಯಲ್ಲಿ ರುದ್ರಾಭಿಷೇಕ, ಮಹಾಪೂಜೆ, ಕುಮಾರಾದಿ ದೈವಗಳಿಗೆ ನೇಮ, ರಾತ್ರಿ ಗೋಪುರದ ಬಾಗಿಲಲ್ಲಿ ಚಕ್ರವರ್ತಿ ಕೊಡಮಣಿತ್ತಾಯ ಹಾಗೂ ಪರಿವಾರ ದೈವಗಳಿಗೆ ನೇಮ. ವರ್ಷಾವಧಿ ಕಟ್ಟೆಯ ಬಳಿ ದೈವಗಳ ನೇಮ, ಮೇ 21 ರಂದು ಪೂರ್ವಾಹ್ನ ಶುದ್ಧ ಕಲಶ ಸಂಪ್ರೋಕ್ಷಣೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ.

Related posts

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ಸoಪನ್ನ

Suddi Udaya

ಉಡುಪಿ ಶ್ರೀಕೃಷ್ಣ ಮಾಸೋತ್ಸವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದಂಪತಿಗಳಿಗೆ ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಗೌರವ

Suddi Udaya

2023-24ನೇ ಸಾಲಿನ ಶೈಕ್ಷಣಿಕ ಶಾಲಾ ವೇಳಾಪಟ್ಟಿ ಪ್ರಕಟ ಮೊದಲನೇ ಶೈಕ್ಷಣಿಕ ಅವಧಿ ಮೇ 29 ರಿಂದ ಆರಂಭ

Suddi Udaya

ನಕ್ಸಲ್ ನಾಯಕ ವಿಕ್ರಮ್ ಗೌಡ ನಕ್ಸಲ್ ನಿಗ್ರಹ ದಳದ ಎನ್ ಕೌಂಟರ್ ನಲ್ಲಿ ಹತ್ಯೆ: ರಾಜ್ಯ ಸರ್ಕಾರ ತಕ್ಷಣ ಎನ್ ಕೌಂಟರ್ ನ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು: ಶೇಖರ್ ಲಾಯಿಲ

Suddi Udaya

ನೆರಿಯ ಒಂಟಿ ಸಲಗ ಕಾರಿನ ಮೇಲೆ ದಾಳಿ ಪ್ರಕರಣ: ಇಬ್ಬರಿಗೆ ಗಾಯ ಐದು ಮಂದಿ ಪ್ರಾಣಾಪಾಯದಿಂದ ಪಾರು

Suddi Udaya

ಇಂದು(ಮಾ.20): ಈದುಲ್ ಫಿತರ್ ಹಬ್ಬದ ಆಚರಣೆ: ದ.ಕ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಣೆ

Suddi Udaya
error: Content is protected !!