24.4 C
ಪುತ್ತೂರು, ಬೆಳ್ತಂಗಡಿ
May 18, 2025
ನಿಧನ

ಧರ್ಮಸ್ಥಳದ ಯುವತಿ,ಏರೋಸ್ಪೇಸ್ ಉದ್ಯೋಗಿ ಪಂಜಾಬ್ ನಲ್ಲಿ ನಿಗೂಢ ಸಾವು

ಬೆಳ್ತಂಗಡಿ:ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.

ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು, ಕಳೆದ ಆರು ತಿಂಗಳ ಹಿಂದೆ ಏರೋಸ್ಪೇಸ್ ಇಂಜಿನಿಯರ್ ಆಗಿ ಡೆಲ್ಲಿಯಲ್ಲಿ ಉದ್ಯೋಗದಲ್ಲಿದ್ದರು. ಮುಂದೆ ಜಪಾನ್ ಗೆ ಉದ್ಯೋಗಕ್ಕೆ ಹೋಗುವವರಿದ್ದು ಪಂಜಾಬ್ ಎಲ್ ಪಿಯು ಪಗ್ವಾಡ ಕಾಲೇಜಿನಿಂದ ಸರ್ಟಿಫಿಕೇಟ್ ಪಡೆಯಲು ತೆರಳಿದ್ದರು. ಸರ್ಟಿಫಿಕೇಟ್ ಪಡೆದ ಕೂಡಲೇ ಮನೆಯವರಲ್ಲಿ ಕಾಲ್ ನಲ್ಲಿ ಮಾತನಾಡಿದ್ದರೆಂದು ತಿಳಿದು ಬಂದಿದೆ.

ಪಂಜಾಬ್ ನ ಜಲಂದರ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕುಟುಂಬದವರು ಪಂಜಾಬ್ ಗೆ ಪ್ರಯಾಣ ಬೆಳೆಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಾಗಿದೆ.

Related posts

ನಿದ್ದೆ ಮಾತ್ರೆ ಸೇವಿಸಿ ಆಸ್ಪತ್ರೆ ಸೇರಿದ್ದ ತಾಯಿ ಸಾವು; ಮಗನ ಸ್ಥಿತಿ ಗಂಭೀರ

Suddi Udaya

ನಿವೃತ್ತ ಗ್ರಾಮಕರಣಿಕ ಡಿ. ಸತ್ಯನಾರಾಯಣ ಅಂರ್ಬುಡತ್ತಾಯ ನಿಧನ

Suddi Udaya

ಬಳಂಜ: ಅಟ್ಲಾಜೆ ಅಂಗನವಾಡಿ ಶಿಕ್ಷಕಿ ಜಾನಕಿ ಹೃದಯಾಘಾತದಿಂದ ನಿಧನ

Suddi Udaya

ವೇಣೂರು: ನೇಮಕ್ಕು ನಿಧನ

Suddi Udaya

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!