September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

ಬೆಳ್ತಂಗಡಿ: ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ಕಾಲೇಜು ಕಟ್ಟಡದಿಂದ ಬಿದ್ದು ಸಾವನ್ನಪ್ಪಿದ ಘಟನೆಯ ಬಗ್ಗೆ ಗೊಂದಲ ಮುಂದುವರಿದಿದ್ದು ಮನೆಯವರನ್ನು ವಂಚಿಸುವ ಪ್ರಯತ್ನ ಸ್ಥಳೀಯ ಪೊಲೀಸರಿಂದ ನಡೆಯುತ್ತಿದೆ ಎಂದು ಮೃತ ಆಕಾಂಕ್ಷಳ ತಂದೆ ಸುರೇಂದ್ರನ್ ಆರೋಪಿಸಿದ್ದಾರೆ.

ಆಕಾಂಕ್ಷ ಸಾವನ್ನಪ್ಪಿದ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಂದೆ ಹಾಗೂ ಮನೆಯವರು ಪೊಲೀಸರಿಗೆ ದೂರು ನೀಡಿ ತಮ್ಮ ಮಗಳ ಅಹಜ ಸಾವಿನ ಬಗ್ಗೆ ಅನುಮಾನವಿದ್ದು ಈ ಬಗ್ಗೆ ಸಮಗ್ರವಾದ ತನಿಖೆ ನಡೆಸುವಂತೆ ದೂರನ್ನು ನೀಡಿದ್ದರು.

ಆದರೆ ಸೋಮವಾರ ಸುರೇಂದ್ರನ್ ಅವರ ಕೈಗೆ ಸ್ಥಳೀಯ ಪೊಲೀಸರು ಎಫ್.ಐ.ಆ‌ರ್ ಪ್ರತಿಯನ್ನು ನೀಡಿದ್ದಾರೆ. ಸ್ಥಳೀಯ ಪಂಜಾಬಿ ಭಾಷೆಯಲ್ಲಿದ್ದ ಈ ಎಫ್.ಐ.ಆರ್ ವರದಿಯನ್ನು ಸ್ಥಳೀಯರ ಸಹಕಾರದಿಂದ ಓದಿ ತಿಳಿದಕೊಂಡಾಗ ಅದರಲ್ಲಿ ತನ್ನ ಮಗಳ ಸಾವಿನ ಬಗ್ಗೆ ಯಾವುದೇ ಅನುಮಾನವಿಲ್ಲ ಖಿನ್ನತೆಗೆ ಒಳಗಾಗಿ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದಾಖಲಿಸಿರುವುದು ತಿಳಿದು ಬಂದಿದೆ.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಮನೆಯವರು ಇದನ್ನು ಒಪ್ಪಲು ಸಾಧ್ಯವಿಲ್ಲ. ನಾವು ನೀಡಿರುವ ದೂರಿನಂತೆಯೇ ಪ್ರಕರಣ ದಾಖಲಿಸಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಇದಾದ ಬಳಿಕ ಇದೀಗ ಮತ್ತೆ ಮೃತಳ ತಂದೆ ಸುರೇಂದ್ರ ಅವರಿಂದ ಮತ್ತೊಂದು ದೂರನ್ನು ಪಡೆದುಕೊಂಡಿದ್ದಾರೆ.

ಈ ದೂರಿನಲ್ಲಿ ತಮಗೆ ಮಗಳ ಸಾವಿಗೆ ಸಂಸ್ಥೆಯಲ್ಲಿ ಪ್ರಾಧ್ಯಾಪಕನಾಗಿರುವ ಮ್ಯಾಥ್ಯ ಕಾರಣನಾಗಿದ್ದಾನೆ ಎಂದು ತಿಳಿಸಿದ್ದಾರೆ.
ಇದೀಗ ಆಕಾಂಕ್ಷ ತಂದೆ ತಿಳಿಸುವ ಮಾಹಿತಿಯಂತೆ ಕಾಲೇಜಿನ ಸಿ.ಸಿ ಕ್ಯಾಮರಾ ಪುಟೇಜ್ ಗಳನ್ನು ಸರಿಯಾಗಿ ನೀಡುತ್ತಿಲ್ಲ. ಕೇವಲ ಆಕೆ ಕೆಳಗೆ ಬೀಳುವ ದೃಶ್ಯಗಳನ್ನು ಮಾತ್ರ ತೋರಿಸಲಾಗುತ್ತಿದೆ. ಆಕೆ ಹೇಗೆ ಕೆಳಗೆ ಬಿದ್ದಳು ಯಾರಾದರೂ ದೂಡಿರುವುದಾ ಅಥವಾ ಆಕೆ ಹಾರಿರುವುದಾ ಎಂದು ಎಲ್ಲಿಯೂ ಕಾಣಿಸುತ್ತಿಲ್ಲ. ಸಿ.ಸಿ.ಕ್ಯಾಮರದ ಪೂರ್ಣ ದಾಖಲೆಗಳನ್ನು ತೋರಿಸುವಂತೆ ಕೇಳಿದರೆ ಅದನ್ನು ನೀಡಲು ಸಿದ್ದರಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ.

ಆರಂಭದಲ್ಲಿ ತನಿಖೆಯ ಭರವಸೆ ನೀಡಿದ್ದ ಪೊಲೀಸರು ಇದೀಗ ತಮಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸುತ್ತಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸುವ ಭರವಸೆ ನೀಡಿರುವುದಾಗಿ ತಿಳಿಸಿದ ಅವರು ಇದೀಗ ಎರಡನೇ ಬಾರಿಗೆ ದೂರನ್ನು ಪೊಲೀಸರು ಸ್ವೀಕರಿಸಿದ್ದು ಯಾವರೀತಿ ಪ್ರಕರಣ ದಾಖಲಿಸುತ್ತಾರೆ ಎಂದು ಕಾದು ನೋಡಬೇಕಾಗಿದೆ.ಪ್ರಕರಣ ದಾಖಲಿಸುವ ಬಗ್ಗೆ ಇರುವ ಗೊಂದಲದಿಂದಾಗಿ ಇನ್ನೂ ಮರಣೋತ್ತರ ಪರೀಕ್ಷೆ ನಡೆದಿಲ್ಲ ಎಂದು ವರದಿಯಾಗಿದೆ.

Related posts

ಅಂಡಿಂಜೆ : ನೆಲ್ಲಿಂಗೇರಿ ಸ.ಕಿ.ಪ್ರಾ. ಶಾಲೆ ಮತ್ತು ಅಂಗನವಾಡಿ ಕೇಂದ್ರದಲ್ಲಿ ಶ್ರೀಮತಿ ಇಂದಿರಾ ಗಾಂಧಿಯವರ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಅರಸಿನಮಕ್ಕಿಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ರಾಜ್ಯಮಟ್ಟದ ವಿಜ್ಞಾನ ಸಮಾವೇಶ: ಉಜಿರೆ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳ ಎರಡು ತಂಡಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಕಳಿಯ ಪರಪ್ಪು ಬಸ್ಸು ನಿಲ್ದಾಣದ ರಸ್ತೆ ಬದಿಯಲ್ಲಿ ಸತ್ತ ದನವನ್ನು ಎಸೆದು ಹೋದ ಅಕ್ರಮ ದನ ಕಳ್ಳ ಸಾಗಾಟಗಾರರು

Suddi Udaya

ನೆರಿಯ: ಅಣಿಯೂರು ನದಿಯಲ್ಲಿ ನೀರಿನ ಮಟ್ಟ ಹೆಚ್ಚಳ: ಕಾಟಾಜೆ ರಸ್ತೆಗೆ ನೀರು ಪ್ರವೇಶಿಸಿ ಮುಳುಗಿದ ಕಾರು

Suddi Udaya
error: Content is protected !!